ಅಡುಗೆ ರುಚಿ ಮಾತ್ರವಲ್ಲ, ಕೂದಲಿನ ಅಂದವನ್ನು ಹೆಚ್ಚಿಸುತ್ತದೆ ‘ಉಪ್ಪು’ !? ಎಲ್ಲಿದೆ ಸಿಂಪಲ್ ಟಿಪ್ಸ್.

ಉಪ್ಪಿಲ್ಲದ ಅಡುಗೆಯನ್ನು ತಿನ್ನುವುದು ಕಷ್ಟಕರ. ಅಡುಗೆಯ ರುಚಿ ಹೆಚ್ಚಿಸುವ ಉಪ್ಪಿನ ಪ್ರಯೋಜನ ಒಂದೆರಡಲ್ಲ. ನಿಯಮಿತವಾಗಿ ಉಪ್ಪು ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳಿವೆ. ಅದೇ ರೀತಿ ಚರ್ಮ ಹಾಗೂ ಕೂದಲಿನ ಆರೈಕೆಗೂ ಈ ಉಪ್ಪನ್ನು ಬಳಸಬಹುದಾಗಿದೆ. ಹೌದು, ಉಪ್ಪು ಚರ್ಮದ ಜೊತೆಗೆ ಕೂದಲಿನ ಅನೇಕ ಸಮಸ್ಯೆಗಳಿಗೆ ರಾಮಬಾಣವಾಗಿದೆ.ಮಹಿಳೆಯ ಅಂದ ಹೆಚ್ಚಿಸುವುದೇ ಉದ್ದ ಹಾಗೂ ದಟ್ಟವಾದ ಕೂದಲು. ಆದರೆ ಇತ್ತೀಚೆಗಿನ ದಿನಗಳಲ್ಲಿ ನಾನಾ ರೀತಿಯ ಕೂದಲಿನ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಶ್ಯಾಂಪೂ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಕೂದಲಿನ ಆರೈಕೆಗೆ ಬಳಸುತ್ತಾರೆ. ಆದರೆ ಈ ಕೂದಲಿಗೆ ಬಳಸುವ ರಾಸಾಯನಿಕ ಮತ್ತು ಕೂದಲಿನ ಉತ್ಪನ್ನಗಳು ಕೂದಲ ಕಾಂತಿಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಹೀಗಾಗಿ ಅಡುಗೆ ಮನೆಯಲ್ಲಿ ಉಪ್ಪನ್ನು ವಿವಿಧ ರೀತಿಯಲ್ಲಿ ಬಳಸುವ ಮೂಲಕ ಕೂದಲಿನ ಆರೈಕೆಗೆ ಮಾಡಬಹುದು. ಈ ಮೂಲಕ ಸೊಂಪಾದ ದಟ್ಟವಾದ ಕೂದಲನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಾದ್ರೆ ಉಪ್ಪಿನ ಬಳಕೆಯೂ ಕೂದಲಿನ ಆರೈಕೆಗೆ ಹೇಗೆ ಸಹಕಾರಿಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

• ಕೂದಲು ಉದುರುವ ಸಮಸ್ಯೆ ಮತ್ತು ತಲೆಹೊಟ್ಟು ಸಮಸ್ಯೆಯಿದ್ದು ಕೂದಲು ಸೊಂಪಾಗಿ ಬೆಳೆಯುತ್ತಿಲ್ಲ ಎನ್ನುವವರು ವಾರಕ್ಕೆ ಎರಡು ಬಾರಿಯಾದರೂ ಎಣ್ಣೆ ಹಾಗೂ ಉಪ್ಪನ್ನು ಬೆರೆಸಿ ಕೂದಲಿಗೆ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ವೇಗವಾಗಿ ಹಾಗೂ ಸೊಂಪಾಗಿ ಬೆಳೆಯುತ್ತದೆ.

• ಉಪ್ಪಿನಲ್ಲಿರುವ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಹಾಗೂ ಸೆಲೆನಿಯಮ್ ಖನಿಜಗಳು ಕೂದಲನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಶ್ಯಾಂಪೂಗೆ ಉಪ್ಪು ಸೇರಿಸಿ ತಲೆಗೆ ನಿಧಾನವಾಗಿ ಮಸಾಜ್ ಮಾಡಿ. ಸ್ವಲ್ಪ ಸಮಯದವರೆಗೆ ಕೂದಲನ್ನು ಹಾಗೆ ಬಿಡಿ. ಆ ಬಳಿಕ ತಣ್ಣೀರಿನಿಂದ ಕೂದಲು ತೊಳೆಯುವುದರಿಂದ ಹೊಳೆಯುವುಳ್ಳ ಮತ್ತು ದಪ್ಪ ಕೂದಲು ನಿಮ್ಮದಾಗುತ್ತದೆ.

• ನಿಯಮಿತವಾಗಿ ಕೂದಲಿಗೆ ಉಪ್ಪನ್ನು ಅನ್ವಯಿಸುವುದರಿಂದ ಕೂದಲಿನ ಶುಷ್ಕತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಉಪ್ಪಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳಿದ್ದು, ಇದು ಕೂದಲಿನಲ್ಲಿ ತೇವಾಂಶವನ್ನು ಕಾಪಾಡುವ ಮೂಲಕ ತಲೆಹೊಟ್ಟು ಹೋಗಲಾಡಿಸಲು ಸಹಕಾರಿಯಾಗಿದೆ.

• ಉಪ್ಪಿನಿಂದ ತಲೆಗೆ ಮಸಾಜ್ ಮಾಡುವ ಮೂಲಕ ಕೂದಲು ಉದುರುವಿಕೆ ಸಮಸ್ಯೆಗೆ ರಾಮಬಾಣವಾಗಿದೆ. ಉಪ್ಪನ್ನು ನೆತ್ತಿಯ ಮೇಲೆ ಉಜ್ಜುವುದರಿಂದ ಇದು ಕೊಳೆಯನ್ನು ತೆಗೆದು ಹಾಕುತ್ತದೆ. ಅದಲ್ಲದೇ, ನೆತ್ತಿಯ ರಂಧ್ರಗಳು ಸುಲಭವಾಗಿ ತೆರೆದುಕೊಂಡು ಕೂದಲನ್ನು ಬಲಪಡಿಸುತ್ತದೆ. ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

• ನೀರಿಗೆ ಉಪ್ಪನ್ನು ಬೆರೆಸಿ ಕೂದಲು ತೊಳೆಯುವ ಮೂಲಕ ಕೂದಲಿನ ಆರೈಕೆ ಮಾಡಬಹುದು. ಇಲ್ಲವಾದರೆ ಶ್ಯಾಂಪೂವಿಗೆ ಉಪ್ಪು ಸೇರಿಸಿ ಕೂದಲನ್ನು ತೊಳೆಯುವುದು ಕೂಡ ಪರಿಣಾಮಕಾರಿಯಾಗಿದೆ. ಇದು ನೆತ್ತಿಯ ಸತ್ತ ಕೋಶಗಳನ್ನು ತೆಗೆದುಹಾಕಿ, ತೈಲ ಗ್ರಂಥಿಗಳ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರಿಂದ ಕೂದಲಿನಲ್ಲಿರುವ ಹೆಚ್ಚುವರಿ ಎಣ್ಣೆ ಅಂಶವು ಕಡಿಮೆಯಾಗುತ್ತದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!