ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು” ಎಂದು ಡಾ. ಮುರುಗೇಶ ಮನೋಹರನ್ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

”ಸದ್ಯ ಸುಗಮ ಚೇತರಿಕೆಗೆ ನೆರವಾಗಲು ಅಗತ್ಯ ಚಿಕಿತ್ಸೆ ಮುಂದುವರೆಸಲಾಗಿದೆ. ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ತಂಡದಿಂದ ಅತ್ಯುತ್ತಮ ಆರೈಕೆ ನಡೆಯುತ್ತಿದೆ. ಶಿವರಾಜ್ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಹಾಗೂ ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಶಿವರಾಜ್ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು” ಎಂದು ಗೀತಾ ಶಿವರಾಜ್ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವರಾಜ್ಕುಮಾರ್ ಕಳೆದ ಬುಧವಾರ ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದರು. ಫ್ಲೋರಿಡಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ಕೆಲ ದಿನಗಳ ಕಾಲ ವಿಶ್ರಾಂತಿ ಪಡೆದು ಜನವರಿ ಅಂತ್ಯದ ವೇಳೆಗೆ ಸ್ವದೇಶಕ್ಕೆ ವಾಪಸಾಗಲಿದ್ದಾರೆ.

ಶಿವರಾಜ್ಕುಮಾರ್ ಯುಎಸ್ ಪ್ರಯಾಣದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಚಿತ್ರರಂಗ ಸೇರಿದಂತೆ ಸಿನಿಮಾ, ರಾಜಕೀಯ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಭೇಟಿ ಕೊಟ್ಟು ಗುಣಮಟ್ಟದ ಸಮಯ ಕಳೆದಿದ್ದರು. ನಟ ಕಿಚ್ಚ ಸುದೀಪ್, ಮಾಜಿ ಸಚಿವ ಬಿ.ಸಿ.ಪಾಟೀಲ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಗಣ್ಯರಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಅದರಲ್ಲೂ ಕಿಚ್ಚ ಸುದೀಪ್ ಭಾವುಕರಾದ ಕ್ಷಣ, ಶಿವಣ್ಣನನ್ನು ಅಪ್ಪಿಕೊಂಡಿದ್ದ ಫೋಟೋ ಕಂಡ ಅಭಿಮಾನಿಗಳು ಮರುಗಿದ್ದರು.
ಅಲ್ಲದೆ, ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ಪ್ರಾರ್ಥಿಸಿ ಅಭಿಮಾನಿಗಳು ರಾಜ್ಯದ ಹಲವೆಡೆ ದೇವಸ್ಥಾನಗಳಲ್ಲಿ ಉರುಳು ಸೇವೆ, ಕೇಶ ಮುಂಡನೆ ಹಾಗೂ ಮಹಾ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!