ಅಲ್ಲು ಅರ್ಜುನ್-ಅಟ್ಲಿ ಸಿನಿಮಾದಲ್ಲಿ ಅನನ್ಯಾ ಪಾಂಡೆ? ಚರ್ಚೆಯಾಗುತ್ತಿದೆ ಸುದ್ದಿ…..

ನಿರ್ದೇಶಕ ಅಟ್ಲಿ ಹಾಗೂ ನಟ ಅಲ್ಲು ಅರ್ಜುನ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ತಯಾರಿ ಜೋರಾಗಿದೆ. ಪಾತ್ರವರ್ಗದ ಆಯ್ಕೆಯಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಸ್ಟೈಲ್ ಐಕಾನ್ ಅಲ್ಲು ಅರ್ಜುನ್ ಜೊತೆ ನಟಿಸುವುದೇ ಖುಷಿಯ ವಿಚಾರ. ಹೀಗಿರುವಾಗ,ಅನೇಕ ನಟಿಯರ ಹೆಸರುಗಳು ಹರಿದಾಡುತ್ತಿವೆ. ಬಾಲಿವುಡ್ ನಟಿ ಅನನ್ಯಾ ಪಾಂಡೆಯ ಹೆಸರೂ ಸಹ ಈ ಲಿಸ್ಟ್ ನಲ್ಲಿ ಕೇಳಿಬರುತ್ತಿದ್ದು, ಈ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂದು ಗಾಸಿಪ್ ಹಬ್ಬಿದೆ.

ನಟ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ‘ಪುಷ್ಪ 2’ ಹಿಟ್ ಆಗಿದ್ದರಿಂದ ಅದನ್ನು ಮೀರಿಸುವಂತಹ ಸಿನಿಮಾ ಮಾಡುವ ಸವಾಲು ಅವರ ಮುಂದಿದೆ. ಈಗ ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಅಲ್ಲದೇ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗುತ್ತಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಮೊದಲು ಮೃಣಾಲ್ ಠಾಕೂರ್ ಹೆಸರು ಕೇಳಿಬಂದಿತ್ತು. ಈಗ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಹೆಸರು ಕೂಡ ಸುದ್ದಿ ಆಗ್ತಾ ಇದೆ.
ನಟಿ ಅನನ್ಯಾ ಪಾಂಡೆ ಅವರಿಗೆ ತೆಲುಗು ಸಿನಿಮಾ ಹೊಸದೇನೂ ಅಲ್ಲ. ಈ ಮೊದಲು ಅವರು ವಿಜಯ್ ದೇವರಕೊಂಡ ಜೊತೆ ‘ಲೈಗರ್’ ಸಿನಿಮಾ ಮಾಡಿದ್ದರು. ಒಂದು ವೇಳೆ ಅಲ್ಲು ಅರ್ಜುನ್ ನಾಯಕತ್ವದ ಹೊಸ ಸಿನಿಮಾವನ್ನು ಅನನ್ಯಾ ಪಾಂಡೆ ಒಪ್ಪಿಕೊಂಡಿರುವುದು ಹೌದಾದರೆ, ಇದು ಅವರ 2ನೇ ತೆಲುಗು ಸಿನಿಮಾ ಆಗಲಿದೆ. ಆದರೆ ಅವರು ಆಯ್ಕೆ ಆಗಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲವೂ ಗಾಸಿಪ್ ಹಂತದಲ್ಲೇ ಇವೆ. ಅಷ್ಟಕ್ಕೂ ಈ ಸಿನಿಮಾಗೆ ಬೇರೆ ಬೇರೆ ನಾಯಕಿಯರ ಹೆಸರು ಕೇಳಿಬರುತ್ತಿರುವುದು ಯಾಕೆ? ಅದಕ್ಕೂ ಕಾರಣ ಇದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರಿಗೆ ಮೂರು ಪಾತ್ರಗಳು ಇರಲಿವೆ ಎಂದು ಹೇಳಲಾಗುತ್ತಿದೆ. ತಂದೆ ಮತ್ತು ಇಬ್ಬರು ಮಕ್ಕಳ ಪಾತ್ರವನ್ನು ಅಲ್ಲು ಅರ್ಜುನ್ ನಿಭಾಯಿಸಲಿದ್ದಾರೆ ಎಂದು ಗಾಸಿಪ್ ಹಬ್ಬಿದೆ. ಆ ಮೂರು ಪಾತ್ರಗಳಿಗೆ ಜೋಡಿ ಬೇಕಿರುವುದರಿಂದ ಹಲವು ನಟಿಯರ ಹೆಸರುಗಳು ಕೇಳಿಬರುತ್ತಿವೆ.

‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ವಿಎಫ್ಎಕ್ಸ್ ಕೆಲಸ ಬಹಳ ಇರಲಿದೆ. ವಿದೇಶದಲ್ಲಿ ಕೂಡ ಅದರ ತಯಾರಿ ನಡೆಯುತ್ತಿದೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಕೂಡ ಸಿಕ್ಕಿದೆ. ಈ ಎಲ್ಲಾ ವಿಚಾರಗಳಿಂದ ಕೊನೆಯದಾಗಿ ಆಯ್ಕೆಯಾಗುವ ನಾಯಕನಟಿ ಯಾರು ಎಂಬುದನ್ನು ಕಾದು ನೋಡಬೇಕಿದೆ.

 

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!