ಅಲ್ಲು ಅರ್ಜುನ್-ಅಟ್ಲಿ ಸಿನಿಮಾದಲ್ಲಿ ಅನನ್ಯಾ ಪಾಂಡೆ? ಚರ್ಚೆಯಾಗುತ್ತಿದೆ ಸುದ್ದಿ…..

ನಿರ್ದೇಶಕ ಅಟ್ಲಿ ಹಾಗೂ ನಟ ಅಲ್ಲು ಅರ್ಜುನ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ತಯಾರಿ ಜೋರಾಗಿದೆ. ಪಾತ್ರವರ್ಗದ ಆಯ್ಕೆಯಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಸ್ಟೈಲ್ ಐಕಾನ್ ಅಲ್ಲು ಅರ್ಜುನ್ ಜೊತೆ ನಟಿಸುವುದೇ ಖುಷಿಯ ವಿಚಾರ. ಹೀಗಿರುವಾಗ,ಅನೇಕ ನಟಿಯರ ಹೆಸರುಗಳು ಹರಿದಾಡುತ್ತಿವೆ. ಬಾಲಿವುಡ್ ನಟಿ ಅನನ್ಯಾ ಪಾಂಡೆಯ ಹೆಸರೂ ಸಹ ಈ ಲಿಸ್ಟ್ ನಲ್ಲಿ ಕೇಳಿಬರುತ್ತಿದ್ದು, ಈ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂದು ಗಾಸಿಪ್ ಹಬ್ಬಿದೆ.

ನಟ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ‘ಪುಷ್ಪ 2’ ಹಿಟ್ ಆಗಿದ್ದರಿಂದ ಅದನ್ನು ಮೀರಿಸುವಂತಹ ಸಿನಿಮಾ ಮಾಡುವ ಸವಾಲು ಅವರ ಮುಂದಿದೆ. ಈಗ ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಅಲ್ಲದೇ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗುತ್ತಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಮೊದಲು ಮೃಣಾಲ್ ಠಾಕೂರ್ ಹೆಸರು ಕೇಳಿಬಂದಿತ್ತು. ಈಗ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಹೆಸರು ಕೂಡ ಸುದ್ದಿ ಆಗ್ತಾ ಇದೆ.
ನಟಿ ಅನನ್ಯಾ ಪಾಂಡೆ ಅವರಿಗೆ ತೆಲುಗು ಸಿನಿಮಾ ಹೊಸದೇನೂ ಅಲ್ಲ. ಈ ಮೊದಲು ಅವರು ವಿಜಯ್ ದೇವರಕೊಂಡ ಜೊತೆ ‘ಲೈಗರ್’ ಸಿನಿಮಾ ಮಾಡಿದ್ದರು. ಒಂದು ವೇಳೆ ಅಲ್ಲು ಅರ್ಜುನ್ ನಾಯಕತ್ವದ ಹೊಸ ಸಿನಿಮಾವನ್ನು ಅನನ್ಯಾ ಪಾಂಡೆ ಒಪ್ಪಿಕೊಂಡಿರುವುದು ಹೌದಾದರೆ, ಇದು ಅವರ 2ನೇ ತೆಲುಗು ಸಿನಿಮಾ ಆಗಲಿದೆ. ಆದರೆ ಅವರು ಆಯ್ಕೆ ಆಗಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲವೂ ಗಾಸಿಪ್ ಹಂತದಲ್ಲೇ ಇವೆ. ಅಷ್ಟಕ್ಕೂ ಈ ಸಿನಿಮಾಗೆ ಬೇರೆ ಬೇರೆ ನಾಯಕಿಯರ ಹೆಸರು ಕೇಳಿಬರುತ್ತಿರುವುದು ಯಾಕೆ? ಅದಕ್ಕೂ ಕಾರಣ ಇದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರಿಗೆ ಮೂರು ಪಾತ್ರಗಳು ಇರಲಿವೆ ಎಂದು ಹೇಳಲಾಗುತ್ತಿದೆ. ತಂದೆ ಮತ್ತು ಇಬ್ಬರು ಮಕ್ಕಳ ಪಾತ್ರವನ್ನು ಅಲ್ಲು ಅರ್ಜುನ್ ನಿಭಾಯಿಸಲಿದ್ದಾರೆ ಎಂದು ಗಾಸಿಪ್ ಹಬ್ಬಿದೆ. ಆ ಮೂರು ಪಾತ್ರಗಳಿಗೆ ಜೋಡಿ ಬೇಕಿರುವುದರಿಂದ ಹಲವು ನಟಿಯರ ಹೆಸರುಗಳು ಕೇಳಿಬರುತ್ತಿವೆ.

‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ವಿಎಫ್ಎಕ್ಸ್ ಕೆಲಸ ಬಹಳ ಇರಲಿದೆ. ವಿದೇಶದಲ್ಲಿ ಕೂಡ ಅದರ ತಯಾರಿ ನಡೆಯುತ್ತಿದೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಕೂಡ ಸಿಕ್ಕಿದೆ. ಈ ಎಲ್ಲಾ ವಿಚಾರಗಳಿಂದ ಕೊನೆಯದಾಗಿ ಆಯ್ಕೆಯಾಗುವ ನಾಯಕನಟಿ ಯಾರು ಎಂಬುದನ್ನು ಕಾದು ನೋಡಬೇಕಿದೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!