ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ….

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ . ಈಗಾಗಲೇ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್ಆರ್ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್ಗಳಿಸಿದ್ದಾರೆ .ಈ 18 ಇನಿಂಗ್ಸ್ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

 

 

 

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!