ಇಂಟರ್ನೆಟ್ ಇಲ್ಲದೇ ಹಣ ಪಾವತಿಸುವುದು ಹೇಗೆ? ಇಲ್ಲಿದೆ ವಿವರ!

ಯುಪಿಐ ಮೂಲಕ ಹಣ ಪಾವತಿಸಲು ಮೊಬೈಲ್ನಲ್ಲಿ ಇಂಟರ್ನೆಟ್ ಅಗತ್ಯ. ಆದರೆ, ಯುಎಸ್ಎಸ್ಡಿ ಕೋಡ್ ಮುಖಾಂತರ ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸಾಧ್ಯ. ನೊಂದಾಯಿತ ನಂಬರ್ನಿಂದ ಯುಎಸ್ಎಸ್ಡಿ ಕೋಡ್ ಅನ್ನು ಡಯಲ್ ಮಾಡಿ ಈ ಸೌಲಭ್ಯ ಬಳಸಬಹುದು.
ಇವತ್ತು ಪೇಟಿಎಂ, ಫೋನ್ಪೇ, ಗೂಗಲ್ ಪೇ ಇತ್ಯಾದಿ ಯುಪಿಐ ಪ್ಲಾಟ್ಫಾರ್ಮ್ಗಳು ಜನರ ದೈನಂದಿನ ಹಣಕಾಸು ವಹಿವಾಟುಗಳಿಗೆ ಅತ್ಯಗತ್ಯ ಸಾಧನಗಳಾಗಿವೆ. ಅಂಗಡಿ ಮುಂಗಟ್ಟುಗಳಲ್ಲಿ ದಿನಸಿ ವಸ್ತುಗಳನ್ನು ಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಪೇಮೆಂಟ್ವರೆಗೆ ಪ್ರತಿಯೊಂದಕ್ಕೂ ಯುಪಿಐ ಬಳಕೆ ಹೆಚ್ಚಾಗಿದೆ. ಈ ಯುಪಿಐ ಬಳಸಬೇಕೆಂದರೆ ಮೊಬೈಲ್ನಲ್ಲಿ ಇಂಟರ್ನೆಟ್ ಕನೆಕ್ಟಿವಿಟಿ ಇರಬೇಕು. ಬೇರೆ ಬೇರೆ ಕಾರಣಗಳಿಗೆ ಇಂಟರ್ನೆಟ್ ಸಂಪರ್ಕ ಸಾಧ್ಯವಾಗದೇ ಹೋಗಬಹುದು ಅಥವಾ ಕೈಕೊಡಬಹುದು. ಅಂತಹ ಸಂದರ್ಭದಲ್ಲಿ ಆನ್ಲೈನ್ನಲ್ಲಿ ಹಣ ಪಾವತಿ ಹೇಗೆ?
ಎನ್ಪಿಸಿಐ ಈ ಸಮಸ್ಯೆಗೆ ಪರಿಹಾರ ಹುಡುಕಿದೆ. ಇಂಟರ್ನೆಟ್ ಅಗತ್ಯ ಇಲ್ಲದೇ ಯುಪಿಐ ಪಾವತಿ ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ರೂಪಿಸಿದೆ. ಅದು ಯುಎಸ್ಎಸ್ಡಿ ಮುಖಾಂತರ ಹಣ ಪಾವತಿಸುವ ಹೊಸ ಕ್ರಮ.
ಯುಪಿಐ ಬಳಕೆದಾರರು ತಮ್ಮ ನೊಂದಾಯಿತ ಮೊಬೈಲ್ ನಂಬರ್ನಿಂದ ಅಧಿಕೃತ ಯುಎಸ್ಎಸ್ಡಿ ಕೋಡ್ ಆದ *99# ಅನ್ನು ಡಯಲ್ ಮಾಡಿದಾಗ ವಿವಿಧ ಬ್ಯಾಂಕಿಂಗ್ ಸೇವೆಗಳಿಗೆ ಅವಕಾಶ ಸಿಗುತ್ತದೆ. ಹಣ ರವಾನಿಸುವುದು, ಅಕೌಂಟ್ ಬ್ಯಾಲನ್ಸ್ ಪರಿಶೀಲಿಸುವುದು, ಯುಪಿಐ ಪಿನ್ ಬದಲಿಸುವುದು ಇತ್ಯಾದಿ ಸೌಲಭ್ಯಗಳನ್ನು ಈ ಸಂದರ್ಭದಲ್ಲಿ ಪಡೆಯಬಹುದು.
ಯುಎಸ್ಎಸ್ಡಿ ಕೋಡ್ ಮೂಲಕ ಹಣ ಪಾವತಿಸುವ ಕ್ರಮ ಹೇಗೆ?
• ಬ್ಯಾಂಕ್ನೊಂದಿಗೆ ನೊಂದಾಯಿತವಾಗಿರುವ ಮೊಬೈಲ್ ನಂಬರ್ನಿಂದ *99# ಅನ್ನು ಡಯಲ್ ಮಾಡಿ.
• ಇದು ಐವಿ ಕಾಲ್ ಆಗಿದ್ದು, ನಿಮಗೆ ಬೇಕಾದ ಭಾಷೆ ಆಯ್ಕೆ ಮಾಡಿಕೊಳ್ಳಿ.
• ಹಣ ರವಾನೆ, ಬಾಕಿ ಹಣ ಪರಿಶೀಲನೆ, ವಹಿವಾಟು ವಿವರ ವೀಕ್ಷಣೆ ಇತ್ಯಾದಿ ಸೌಲಭ್ಯಗಳಲ್ಲಿ ನಿಮಗೆ ಬೇಕಾದ್ದನ್ನು ಆಯ್ದುಕೊಳ್ಳಬಹುದು.
• ಹಣ ಕಳುಹಿಸಬೇಕೆಂದಿದ್ದರೆ ‘1’ ಅನ್ನು ಟೈಪ್ ಮಾಡಬಹುದು. ಬಳಿಕ ಸೆಂಡ್ ಅನ್ನು ಒತ್ತಿರಿ.
• ಆಗ ಮೊಬೈಲ್ ನಂಬರ್, ಯುಪಿಐ ಐಡಿ, ಮೊಬೈಲ್ನಲ್ಲಿ ಸೇವ್ ಆಗಿರುವ ಕಾಂಟ್ಯಾಕ್ಟ್ ಇತ್ಯಾದಿ ಹಣ ಕಳುಹಿಸುವ ವಿಧಾನಗಳ ಆಯ್ಕೆ ಇರುತ್ತದೆ.
ಯಾವುದಾದರೊಂದನ್ನು ಆಯ್ದುಕೊಂಡು, ಸೆಂಡ್ ಒತ್ತಿರಿ.
• ಮೊಬೈಲ್ ನಂಬರ್ ಅನ್ನು ನೀವು ಆಯ್ದುಕೊಂಡರೆ ಆಗ ನೀವು ಹಣ ಕಳುಹಿಸಬೇಕಾದ ವ್ಯಕ್ತಿಯ ಮೊಬೈಲ್ ನಂಬರ್ ಅನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಯುಪಿಐ ಐಡಿ ಆಯ್ಕೆ ಮಾಡಿಕೊಂಡಿದ್ದರೆ ಆಗ ಆ ವ್ಯಕ್ತಿಯ ಯುಪಿಐ ಐಡಿಯನ್ನು ನಮೂದಿಸಬೇಕಾಗುತ್ತದೆ.
• ಈಗ ಎಷ್ಟು ಹಣ ಪಾವತಿಸಬೇಕು, ಆ ಮೊತ್ತವನ್ನು ನಮೂದಿಸಿ, ಸೆಂಡ್ ಒತ್ತಿರಿ.
• ಆ ಹಣ ಪಾವತಿ ಯಾಕೆಂದು ನೀವು ವಿವರ ಬರೆಯುವ ಅವಕಾಶ ಇರುತ್ತದೆ. ಇದು ಅನಗತ್ಯ ಎನಿಸಿದರೆ ನಿರ್ಲಕ್ಷಿಸಬಹುದು.
• ಈಗ ಕೊನೆಯ ಕ್ರಮವಾಗಿ ನೀವು ನಿಮ್ಮ ಯುಪಿಐ ಪಿನ್ ನಂಬರ್ ಅನ್ನು ಎಂಟ್ರ ಮಾಡಬೇಕು. ಆಗ ಹಣ ರವಾನೆ ಕಾರ್ಯ ಪೂರ್ಣಗೊಳ್ಳುವುದು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!