ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಶಿವಮೊಗ್ಗ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿತ್ತು ತಿನ್ನುವ ಬಡತನ, ತಮ್ಮನಿಗೆ ಅನಾರೋಗ್ಯ, ಬೆಳೆದು ನಿಂತ ಮಗ ನೆಟ್ಟಗೆ ದುಡಿಯಲಿಲ್ಲ. ಹೀಗಾಗಿ ಮಹಿಳೆಯೇ ದುಡಿದು ಸಂಸಾರ ನಡೆಸುತ್ತಿದ್ದಳು. ಮನೆಯಲ್ಲಿ ಒಬ್ಬಳೇ ದುಡಿದು ಸಾಕಾಗಿ ಹೋಗಿದ್ದ ಮಹಿಳೆಯು ಇಬ್ಬರಿಗೂ ವಿಷಕೊಟ್ಟು ತಾನು ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ

ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಆಜಾದ್ ನಗರದ ಮುಖ್ಯ ರಸ್ತೆಯಲ್ಲಿ ಎಲ್ಲರೂ ಬೆಚ್ಚಿ ಬೀಳುವ ಘಟನೆ ನಡೆದಿತ್ತು. ಕಳೆದ ಎರಡು ದಿನಗಳ ಹಿಂದೆ ಮನೆಯ ಯಜಮಾನಿ ಭುವನೇಶ್ವರಿ (40) ಮತ್ತು ಈಕೆಯ ತಮ್ಮ ಮಾರುತಿ (38) ಹಾಗೂ ಮಗ ದರ್ಶನ (22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭುವನೇಶ್ವರಿ ಹೊಟೇಲ್ ಕೆಲಸ ಮಾಡಿಕೊಂಡಿದ್ದಳು. ಇಡೀ ಕುಟುಂಬದ ಜವಾಬ್ದಾರಿಯು ಮಹಿಳೆಯ ಮೇಲೆ ಇತ್ತು. ಮನೆಯಲ್ಲಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮತ್ತು ವಯಸ್ಸಿಗೆ ಬಂದ ಮಗನು ನೆಟ್ಟಿಗೆ ದುಡಿಯುತ್ತಿರಲಿಲ್ಲ. ಈ ಇಬ್ಬರು ದುಡಿಯದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು

ಷ್ಟೇ ಹೇಳಿದರೂ ಇಬ್ಬರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಇದರಿಂದ ರೋಸಿ ಹೋಗಿದ್ದ ತಾಯಿ ಮೊನ್ನೆ(ಆ.11) ರಾತ್ರಿ ಇಬ್ಬರಿಗೂ ಊಟದಲ್ಲಿ ವಿಷ ಕೊಟ್ಟು ಕೊಂದಿದ್ದಾಳೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆ ಒಳಗೆಯಿಂದ ಲಾಕ್ ಆಗಿತ್ತು. ಅಕ್ಕ-ಪಕ್ಕದವರಿಗೆ ಶವದ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಬಳಿಕ ಕಿಟಕಿ ಗಾಜು ಒಡೆದು ನೋಡಿದಾಗ ಮೂವರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಮೂವರು ಸಾವು ಕಂಡು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದ್ದು, ಸಂಬಂಧಿಗಳ ಅಕ್ರಂದನ ಮುಗಿಲು ಮುಟ್ಟಿದೆ.

  • Related Posts

    ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

    ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

    ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!