ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !!

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ- ನಟಿಯರ ಕುರಿತು ಮಾಡಿದ ಭಾಷಣದ ವೇಳೆ ಕಲಾವಿದರ ನಟ್ಟು- ಬೋಲ್ಟು ಸರಿ ಮಾಡ್ತೇನೆ ಎಂಬ ಅಸಡ್ಡೆ ಹೇಳಿಕೆ ನೀಡಿರುವ ಡಿ.ಕೆ ಶಿವಕುಮಾರ್ ಕೂಡಲೇ ಚಿತ್ರರಂಗದವರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರರಂಗವದವರಿಗೆ ಅವರದ್ದೇ ಆದ ಗೌರವ, ಸ್ಥಾನಮಾನಗಳಿವೆ. ಅದರಲ್ಲೂ ನಟ- ನಟಿಯರು ಸೇರಿದಂತೆ ತಂತ್ರಜ್ಞರು, ಕಲಾವಿದರು ಹೀಗೆ ಸಾವಿರಾರು ಮಂದಿ ಚಿತ್ರರಂಗವನ್ನು ನಂಬಿ ಬದುಕುತ್ತಿದ್ದಾರೆ. ಆದರೆ ಅಂತವರಿಗೆ ಒಂದು ಸರ್ಕಾರಿ ಆಸ್ಪತ್ರೆಗೆ ಹೋದರೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ..ಅಲ್ಲದೇ ಸರ್ಕಾರದ ಸವಲತ್ತುಗಳು ದೊರಕುತ್ತಿಲ್ಲ…ಹಗಲಿರುಳೆನ್ನದೇ ದುಡಿಯುವ ಚಿತ್ರರಂಗವದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿ ಅವರಿಗಿಲ್ಲ ಎಂದು ಮಾತನಾಡಿದರು .

 

ಒಂದು ಸಿನಿಮಾ ಮಾಡಬೇಕಾದರೇ ಎಷ್ಟು ಕಷ್ಟ ಪಡಬೇಕಿದೆ. ಚಿತ್ರಕ್ಕೆ ಸಿಗುವ ಸಬ್ಸಿಡಿಗೆ ವರ್ಷಾನುಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಚಿತ್ರಕ್ಕೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ ಎಂದಿರುವ ರೂಪ ಅಯ್ಯರ್, ಅಣ್ಣಾವ್ರು ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರುಗಳ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನ ಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ಚಿತ್ರರಂಗದವರನ್ನು ಅವರ ಪಾಡಿಗೆ ಬಿಡಿ.ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಿ ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾಡಿ ಹೊರ ರಾಜ್ಯ, ದೇಶಗಳಿಂದ ಇತರರನ್ನು ಕರೆಸಿ ಹೊಗಳಿ ಸನ್ಮಾನಿಸುವುದನ್ನು ಬಿಟ್ಟು, ನಮ್ಮ ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರಿಗೆ ಮನ್ನಣೆ ಕೊಟ್ಟು, ಪ್ರೋತ್ಸಾಹಿಸಿ. ಇಲ್ಲದಿದ್ದರೆ ಸುಮ್ಮನಿದ್ದುಬಿಡಿ. ಅದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಕಲಾವಿದರನ್ನು ಅವಮಾನಿಸಬೇಡಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿಯಾಗಿ ಕಲಾವಿದರ ಬಗ್ಗೆ ಮಾತನಾಡುವುದು ನಿಜಕ್ಕೂ ಅವರ ಹುದ್ದೆಗ ಶೋಭೆ ತರುವಂತದಲ್ಲ. ರಾಜಕೀಯವಾಗಿ ಅವರ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ .ಅದನ್ನು ಬಿಟ್ಟು ಬಹಿರಂಗವಾಗಿ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಅವಮಾನಿಸುವಂತಹ ಹೇಳಿಕೆ ನೀಡುವುದನ್ನು ಈ ಕೂಡಲೇ ನಿಲ್ಲಿಸಲಿ ಎಂದು ರೂಪ ಅಯ್ಯರ್ ಒತ್ತಾಯಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!