ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !!

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ- ನಟಿಯರ ಕುರಿತು ಮಾಡಿದ ಭಾಷಣದ ವೇಳೆ ಕಲಾವಿದರ ನಟ್ಟು- ಬೋಲ್ಟು ಸರಿ ಮಾಡ್ತೇನೆ ಎಂಬ ಅಸಡ್ಡೆ ಹೇಳಿಕೆ ನೀಡಿರುವ ಡಿ.ಕೆ ಶಿವಕುಮಾರ್ ಕೂಡಲೇ ಚಿತ್ರರಂಗದವರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರರಂಗವದವರಿಗೆ ಅವರದ್ದೇ ಆದ ಗೌರವ, ಸ್ಥಾನಮಾನಗಳಿವೆ. ಅದರಲ್ಲೂ ನಟ- ನಟಿಯರು ಸೇರಿದಂತೆ ತಂತ್ರಜ್ಞರು, ಕಲಾವಿದರು ಹೀಗೆ ಸಾವಿರಾರು ಮಂದಿ ಚಿತ್ರರಂಗವನ್ನು ನಂಬಿ ಬದುಕುತ್ತಿದ್ದಾರೆ. ಆದರೆ ಅಂತವರಿಗೆ ಒಂದು ಸರ್ಕಾರಿ ಆಸ್ಪತ್ರೆಗೆ ಹೋದರೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ..ಅಲ್ಲದೇ ಸರ್ಕಾರದ ಸವಲತ್ತುಗಳು ದೊರಕುತ್ತಿಲ್ಲ…ಹಗಲಿರುಳೆನ್ನದೇ ದುಡಿಯುವ ಚಿತ್ರರಂಗವದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿ ಅವರಿಗಿಲ್ಲ ಎಂದು ಮಾತನಾಡಿದರು .

 

ಒಂದು ಸಿನಿಮಾ ಮಾಡಬೇಕಾದರೇ ಎಷ್ಟು ಕಷ್ಟ ಪಡಬೇಕಿದೆ. ಚಿತ್ರಕ್ಕೆ ಸಿಗುವ ಸಬ್ಸಿಡಿಗೆ ವರ್ಷಾನುಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಚಿತ್ರಕ್ಕೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ ಎಂದಿರುವ ರೂಪ ಅಯ್ಯರ್, ಅಣ್ಣಾವ್ರು ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರುಗಳ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನ ಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ಚಿತ್ರರಂಗದವರನ್ನು ಅವರ ಪಾಡಿಗೆ ಬಿಡಿ.ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಿ ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾಡಿ ಹೊರ ರಾಜ್ಯ, ದೇಶಗಳಿಂದ ಇತರರನ್ನು ಕರೆಸಿ ಹೊಗಳಿ ಸನ್ಮಾನಿಸುವುದನ್ನು ಬಿಟ್ಟು, ನಮ್ಮ ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರಿಗೆ ಮನ್ನಣೆ ಕೊಟ್ಟು, ಪ್ರೋತ್ಸಾಹಿಸಿ. ಇಲ್ಲದಿದ್ದರೆ ಸುಮ್ಮನಿದ್ದುಬಿಡಿ. ಅದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಕಲಾವಿದರನ್ನು ಅವಮಾನಿಸಬೇಡಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿಯಾಗಿ ಕಲಾವಿದರ ಬಗ್ಗೆ ಮಾತನಾಡುವುದು ನಿಜಕ್ಕೂ ಅವರ ಹುದ್ದೆಗ ಶೋಭೆ ತರುವಂತದಲ್ಲ. ರಾಜಕೀಯವಾಗಿ ಅವರ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ .ಅದನ್ನು ಬಿಟ್ಟು ಬಹಿರಂಗವಾಗಿ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಅವಮಾನಿಸುವಂತಹ ಹೇಳಿಕೆ ನೀಡುವುದನ್ನು ಈ ಕೂಡಲೇ ನಿಲ್ಲಿಸಲಿ ಎಂದು ರೂಪ ಅಯ್ಯರ್ ಒತ್ತಾಯಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!