ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !!

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ- ನಟಿಯರ ಕುರಿತು ಮಾಡಿದ ಭಾಷಣದ ವೇಳೆ ಕಲಾವಿದರ ನಟ್ಟು- ಬೋಲ್ಟು ಸರಿ ಮಾಡ್ತೇನೆ ಎಂಬ ಅಸಡ್ಡೆ ಹೇಳಿಕೆ ನೀಡಿರುವ ಡಿ.ಕೆ ಶಿವಕುಮಾರ್ ಕೂಡಲೇ ಚಿತ್ರರಂಗದವರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರರಂಗವದವರಿಗೆ ಅವರದ್ದೇ ಆದ ಗೌರವ, ಸ್ಥಾನಮಾನಗಳಿವೆ. ಅದರಲ್ಲೂ ನಟ- ನಟಿಯರು ಸೇರಿದಂತೆ ತಂತ್ರಜ್ಞರು, ಕಲಾವಿದರು ಹೀಗೆ ಸಾವಿರಾರು ಮಂದಿ ಚಿತ್ರರಂಗವನ್ನು ನಂಬಿ ಬದುಕುತ್ತಿದ್ದಾರೆ. ಆದರೆ ಅಂತವರಿಗೆ ಒಂದು ಸರ್ಕಾರಿ ಆಸ್ಪತ್ರೆಗೆ ಹೋದರೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ..ಅಲ್ಲದೇ ಸರ್ಕಾರದ ಸವಲತ್ತುಗಳು ದೊರಕುತ್ತಿಲ್ಲ…ಹಗಲಿರುಳೆನ್ನದೇ ದುಡಿಯುವ ಚಿತ್ರರಂಗವದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿ ಅವರಿಗಿಲ್ಲ ಎಂದು ಮಾತನಾಡಿದರು .

 

ಒಂದು ಸಿನಿಮಾ ಮಾಡಬೇಕಾದರೇ ಎಷ್ಟು ಕಷ್ಟ ಪಡಬೇಕಿದೆ. ಚಿತ್ರಕ್ಕೆ ಸಿಗುವ ಸಬ್ಸಿಡಿಗೆ ವರ್ಷಾನುಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಚಿತ್ರಕ್ಕೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ ಎಂದಿರುವ ರೂಪ ಅಯ್ಯರ್, ಅಣ್ಣಾವ್ರು ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರುಗಳ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನ ಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ಚಿತ್ರರಂಗದವರನ್ನು ಅವರ ಪಾಡಿಗೆ ಬಿಡಿ.ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಿ ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾಡಿ ಹೊರ ರಾಜ್ಯ, ದೇಶಗಳಿಂದ ಇತರರನ್ನು ಕರೆಸಿ ಹೊಗಳಿ ಸನ್ಮಾನಿಸುವುದನ್ನು ಬಿಟ್ಟು, ನಮ್ಮ ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರಿಗೆ ಮನ್ನಣೆ ಕೊಟ್ಟು, ಪ್ರೋತ್ಸಾಹಿಸಿ. ಇಲ್ಲದಿದ್ದರೆ ಸುಮ್ಮನಿದ್ದುಬಿಡಿ. ಅದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಕಲಾವಿದರನ್ನು ಅವಮಾನಿಸಬೇಡಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿಯಾಗಿ ಕಲಾವಿದರ ಬಗ್ಗೆ ಮಾತನಾಡುವುದು ನಿಜಕ್ಕೂ ಅವರ ಹುದ್ದೆಗ ಶೋಭೆ ತರುವಂತದಲ್ಲ. ರಾಜಕೀಯವಾಗಿ ಅವರ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ .ಅದನ್ನು ಬಿಟ್ಟು ಬಹಿರಂಗವಾಗಿ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಅವಮಾನಿಸುವಂತಹ ಹೇಳಿಕೆ ನೀಡುವುದನ್ನು ಈ ಕೂಡಲೇ ನಿಲ್ಲಿಸಲಿ ಎಂದು ರೂಪ ಅಯ್ಯರ್ ಒತ್ತಾಯಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!