ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ ; ವೈರಲ್ ಆಯ್ತು ವಿಡಿಯೋ….

ಸಾಮಾನ್ಯವಾಗಿ ಗೋರಂಟಿ ಎಲೆಗಳಿಂದ ಮೆಹಂದಿಯನ್ನು ತಯಾರು ಮಾಡುತ್ತಾರೆ ಅಲ್ವಾ. ಅದು ಕೈಗೆ ಹಾಕಿದಾಗ ಗಾಢ ಬಣ್ಣ ಬರಲಿ ಎಂದು ಅದಕ್ಕೆ ಒಂದಷ್ಟು ಕೆಮಿಕಲ್ ಉತ್ಪನ್ನಗಳನ್ನು ಕೂಡಾ ಹಾಕ್ತಾರೆ. ಆದ್ರೆ ಇಲ್ಲೊಬ್ಬಳು ಯುವತಿ ಕಲ್ಲಿನಿಂದ ನ್ಯಾಚುರಲ್ ಆಗಿರುವಂತಹ ಮೆಹಂದಿಯನ್ನು ತಯಾರಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿತ್ತಿದ್ದು, ಅರೇ ಕಲ್ಲಿನಿಂದ ಇದು ಹೇಗಪ್ಪಾ ಮೆಹಂದಿ ರೆಡಿ ಮಾಡೋಕೆ ಸಾಧ್ಯ ಎಂದು ನೆಟ್ಟಿಗರು ತಲೆ ಕೆಡಿಸಿಕೊಂಡಿದ್ದಾರೆ. ಕೈಗಳಿಗೆ ಮೆಹಂದಿ ಹಚ್ಚುವುದೆಂದರೆ ಹೆಂಗಳೆಯರಿಗೆ ಪಂಚಪ್ರಾಣ. ಮೆಹಂದಿಯನ್ನು ಮಂಗಳಕರ ಎಂದು ಪರಿಗಣಿಸಿರುವ ಕಾರಣ ಹೆಚ್ಚಿನ ಮಹಿಳೆಯರು ಶುಭ ಕಾರ್ಯಗಳ ಸಂದರ್ಭದಲ್ಲಿ ಕೈತುಂಬಾ ಮೆಹಂದಿ ಹಾಕಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಈ ಮೆಹಂದಿಗಳನ್ನು ಗೋರಂಟಿ ಎಲೆಗಳಿಂದ ರೆಡಿ ಮಾಡ್ತಾರೆ. ಜೊತೆಗೆ ಕೈಗೆ ಹಾಕಿದ ಬಳಿಕ ಗೋರಂಟಿ ಬಣ್ಣ ಗಾಢವಾಗಿ ಮೂಡಲಿ ಎಂದು ಒಂದಷ್ಟು ಕೆಮಿಕಲ್ಗಳನ್ನು ಕೂಡಾ ಸೇರಿಸ್ತಾರೆ. ಹೀಗಿರುವಾಗ ಇಲ್ಲೊಬ್ಬಳು ರೂಬಿ ಠಾಕೂರ್ ಎಂಬಾಕೆ ಕೆಮಿಕಲ್ ಫ್ರೀ ಮೆಹಂದಿಯ ಬಗ್ಗೆ ತಿಳಿಸಿಕೊಟ್ಟಿದ್ದಾಳೆ. ಹೌದು ಹಿಮಾಚಲ ಪ್ರದೇಶದ ಆಕೆ ಅಲ್ಲಿನ ಪಹಾಡಿ ಸಂಪ್ರದಾಯದಂತೆ ಕಲ್ಲುಗಳಲ್ಲಿ ಅಂಟಿರುವ ಪಾಚಿಯಂತಹ ವಸ್ತುವಿನಿಂದ ನೈಸರ್ಗಿಕ ಮೆಹಂದಿಯನ್ನು ತಯಾರಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.

ಕಲ್ಲಿನಿಂದ ನ್ಯಾಚುರಲ್ ಮೆಹಂದಿ ರೆಡಿ ಮಾಡಿದ ಯುವತಿ: ಮೆಹಂದಿಯನ್ನು ಗೋರಂಟಿ ಎಲೆಗಳಿಂದ ತಯಾರು ಮಾಡ್ತಾರೆ ಅನ್ನೋ ವಿಚಾರ ಬಹುತೇಕ ನಮಗೆಲ್ಲರಿಗೂ ಗೊತ್ತೇ ಇದೆ. ಹೀಗಿರುವಾಗ ಇಲ್ಲೊಬ್ಬಳು ಹಿಮಾಚಲ ಪ್ರದೇಶದ ಯುವತಿ ಕಲ್ಲಿನಿಂದ ನ್ಯಾಚುರಲ್ ಮೆಹಂದಿ ತೆಗೆಯುವುದು ಹೇಗೆಂಬುದನ್ನು ಹೇಳಿ ಕೊಟ್ಟಿದ್ದಾಳೆ. ಆಕೆ ಬಂಡೆ ಕಲ್ಲಿನಲ್ಲಿ ಅಂಟಿರುವಂತಹ ಪಾಚಿಯಂತಹ ವಸ್ತುವನ್ನು ತೆಗೆದು ಅದಕ್ಕೆ ಸ್ವಲ್ಪ ನೀರು ಹಾಕಿ ಚೆನ್ನಾಗಿ ಅರೆದು ಮೆಹಂದಿ ರೆಡಿ ಮಾಡಿ ಅದನ್ನು ಕೈಗೆ ಹಚ್ಚಿದ್ದಾಳೆ. ನಾಲ್ಕು ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ 7.8 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ತುಂಬಾನೇ ಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕಲ್ಲಿನಿಂದಲೂ ಮೆಹಂದಿ ತಯಾರಿಸಬಹುದೆಂದು ಇವತ್ತೇ ಗೊತ್ತಾಗಿದ್ದುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಾಲ್ಯದಲ್ಲಿ ನಾವು ಕೂಡಾ ಈ ಮೆಹಂದಿಯನ್ನು ಹಾಕಿದ್ದೇವೆʼ ಎಂದು ಹೇಳಿದ್ದಾರೆ. ಇನ್ನೋ ಅನೇಕರು ಇದು ಹೊಸ ವಿಷಯವೆಂದು ಆಶ್ಚರ್ಯಪಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!