
ಈಗಂತೂ ಮನುಷ್ಯನಲ್ಲಿ ಮಾನವೀಯತೆ , ಒಳ್ಳೆಯತನ ಎನ್ನುವಂತಹದ್ದು ಸಂಪೂರ್ಣವಾಗಿ ಮರೆಯಾಗಿದೆ. ಹಣ, ಆಸ್ತಿ-ಅಂತಸ್ತಿನ ನಡುವೆ ಸಂಬಂಧಕ್ಕೆ ಮಹತ್ವವೇ ಇಲ್ಲದಂತಾಗಿದೆ. ಇನ್ನೂ ಮನುಷ್ಯರಲ್ಲಿ ಒಳ್ಳೆಯತನ ಕಾಣಸಿಗುವುದೇ ಅಪರೂಪವಾಗಿಬಿಟ್ಟಿದ್ದು, ಇಲ್ಲೊಂದು ಆನೆ ಮಾನವೀಯತೆ, ಒಳ್ಳೆಯತನದ ಪಾಠವನ್ನು ಕಲಿಸಿದೆ. ಹೌದು ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸುವ ಮೂಲಕ ಆನೆಯೊಂದು ಒಳ್ಳೆಯತನ ಏನೆಂಬುದನ್ನು ತೋರಿಸಿಕೊಟ್ಟಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಗಜರಾಜನ ದೊಡ್ಡ ಗುಣಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಚಿಂಕಾರವೊಂದು ಕೊಳದಲ್ಲಿ ಬಿದ್ದು ಒದ್ದಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಇದನ್ನು ಕಂಡಂತಹ ಗಜರಾಜ ಅಲ್ಲಿಗೆ ಹೋಗಿ, ತನ್ನ ಸೊಂಡಿಲಿನ ಸಹಾಯದಿಂದ ಕೊಳದಲ್ಲಿ ಬಿದ್ದ ಚಿಂಕಾರವನ್ನು ಮೇಲೆತ್ತುವ ಮೂಲಕ ಮುಗ್ಧ ಜೀವವನ್ನು ರಕ್ಷಣೆ ಮಾಡಿದೆ.





