ಕೋಳಿಗಳಲ್ಲಿ ಹಕ್ಕಿ ಜ್ವರ ಭೀತಿ ; ಕಟ್ಟೆಚ್ಚರಕ್ಕೆ ಸರ್ಕಾರ ಆದೇಶ.

ಸತ್ತ ಕೋಳಿಗಳ ಸ್ಯಾಂಪಲ್ ಭೂಪಾಲ್ ಸಂಶೋಧನಾಲಯಕ್ಕೆ ರವಾನೆ, ಹಕ್ಕಿಜ್ವರ

ಬೆಂಗಳೂರು :- ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಆದೇಶ ಮಾಡಿದೆ.
ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ತುಮಕೂರಿನ ಕೆಲವು ಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಈ ಸಾಂಕ್ರಾಮಿಕ ರೋಗ ಕಂಡು ಬಂದಿದೆ. ಸಾಮೂಹಿಕವಾಗಿ ಕೋಳಿಗಳು ಸಾಯುತ್ತಿ ರುವ ಹಿನ್ನೆಲೆಯಲ್ಲಿ ರೋಗ ಪತ್ತೆಗೆ ಭೂಪಾಲ್ನ ಸಂಶೋಧನಾ ಕೇಂದ್ರಕ್ಕೆ ಮೃತ ಕೋಳಿಗಳ ಸ್ಯಾಂಪಲ್ ಕಳುಹಿಸಲಾಗಿದೆ. ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಳ್ಳು ತ್ತಿದ್ದಂತೆ ಕುಕ್ಕುಟ ಉದ್ಯಮ ನೆಲೆ ಕಚ್ಚಿದೆ. ಮುಂದಿನ ದಿನಗಳಲ್ಲಿ ಕೋಳಿ ಸಾಕಾಣಿಕೆದಾರರಿಗೆ ನಷ್ಟ ಉಂಟಾ ಗುವ ಸಾಧ್ಯತೆಗಳು ಕಂಡುಬರುತ್ತಿವೆ. ರೋಗ ಕಂಡು ಬಂದ ಕಡೆಗಳ ಪ್ರದೇಶದ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪಶುಸಂಗೋಪನಾ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಎಲ್ಲಾ ಕೋಳಿಗಳನ್ನು ಸಾಯಿಸುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಮೃತ ಕೋಳಿಗಳಲ್ಲಿ
ಎಚ್5ಎನ್ ಏವಿಯನ್ ಇನ್ನೂಯೆನ್ನಾ ರೋಗಾಣು ಇರುವುದು ಪತ್ತೆಯಾಗಿದೆ. ಇದು ವ್ಯಾಪಕವಾಗಿ ಹರಡು ವುದನ್ನು ತಡೆಗಟ್ಟಲು ಎರಡೂ ಇಲಾಖೆಗಳು ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದಲ್ಲದೆ, ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.


ಈ ರೋಗ ಪಕ್ಷಿಗಳಿಂದ ಕೋಳಿಗೆ ಹರಡಿರಬಹುದು ಎಂಬ ಸಂಶಯವಿದೆ, ಆದರೆ, ಇದುವರೆಗೂ ಈ ರೋಗ ಮನುಷ್ಯರಿಗೆ ತಗುಲಿರುವ ವರದಿ ಇಲ್ಲ. ಮೊದಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಎರಡು-ಮೂರು ದಿನಗಳಲ್ಲೇ ರಾಜ್ಯದ ಇತರೆ ಭಾಗಗಳಿಗೆ ಹರಡಿರುವುದರಿಮದ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲೇ ಕಟ್ಟೆಚ್ಚರ ವಹಿಸುವ ಜೊತೆಗೆ ವಿವಿಧ ಭಾಗಗಳ ಕೋಳಿಗಳ ರೋಗ ಪರೀಕ್ಷೆಗೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೋಳಿ ಗಳಿಗೆ ಹಕ್ಕಿ ಜ್ವರ ತಗಲುವುದು ಸಾಮಾನ್ಯ, ರೋಗಕ್ಕೆ ತುತ್ತಾದ ಕೋಳಿ ಮಾಂಸ ಸೇವನೆ ಮಾಡಿದರೆ ಮನುಷ್ಯ ನಿಗೂ ಸಾಂಕ್ರಾಮಿಕ ರೋಗ ತಗಲುವ ಸಾಧ್ಯತೆ ಇದೆ.
ಹಾಸಿಗೆ ಮೀಸಲಿಡಲು ಸೂಚನೆ: ಕೋಳಿ ಮಾಂಸ
ತಿನ್ನುವ ಮೊದಲು ಹೆಚ್ಚಿನ ಉಷ್ಣತೆಯಲ್ಲಿ ಬೇಯಿಸಿ ಬಳಸಿದರೆ ದುಷ್ಪರಿಣಾಮ ಉಂಟಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಕ್ಕಿ ಜ್ವರ ಕಾಣಿಸಿ ಕೊಂಡಿರುವ ಪ್ರದೇಶಕ್ಕೆ ಹತ್ತಿರದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಇಲಾಖೆ ಸೂಚಿಸಿದೆ. ಅಲ್ಲದೆ, ರೋಗ ಕಾಣಿಸಿಕೊಂಡ ವ್ಯಕ್ತಿಗಳಿಗೆ ಅಗತ್ಯ ಔಷಧ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆಯೂ ತಿಳಿಸಲಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು