ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿಗಳು….

ಕನ್ನಡದ ಕಿರುತೆರೆ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡ ಸಿಂಗರ್ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ಧನಂಜಯ್ ಶರ್ಮ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಅಖಿಲಾ ನಿರ್ಧರಿಸಿದ್ದಾರೆ. ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮ ಅರ್ಜಿ ಸಲ್ಲಿಸಿದ್ದಾರೆ.ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ಖಾಸಗಿ ಬದುಕಿನ ಬಗ್ಗೆ ಶಾಕಿಂಗ್ ಸುದ್ದಿ ಇದು. ‘ಕನ್ನಡ ಕೋಗಿಲೆ’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 3 ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು. ಆದರೆ ಅವರ ಸಂಸಾರದಲ್ಲಿ ಸಾಮರಸ್ಯ ಮಾಯವಾಗಿದೆ. ಧನಂಜಯ್ ಶರ್ಮಾ ಮತ್ತು ಅಖಿಲಾ ಪಜಿಮಣ್ಣು ಅವರು ಬೇರಾಗಲು ನಿರ್ಧರಿಸಿದ್ದಾರೆ.

ಅಖಿಲಾ ಅವರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಅವರು ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರು ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಅವರು ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಧನಂಜಯ್ ಶರ್ಮ ಅವರು ಪುತ್ತೂರಿನ ನ್ಯಾಯಾಲಯಕ್ಕೆ ಆಗಮಿಸಿ ಹೇಳಿಕೆ ನೀಡಿ ವಾಪಸ್ ತೆರಳಿದ್ದಾರೆ. ಸದ್ಯದಲ್ಲೇ ಅವರು ಅಮೆರಿಕಕ್ಕೆ ಹೋಗಲಿದ್ದಾರೆ. ಸದ್ಯ ನ್ಯಾಯಾಲಯದಲ್ಲಿ ಈ ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ಮುಗಿದಿದೆ. ನ್ಯಾಯಾಲಯವು ಶುಕ್ರವಾರಕ್ಕೆ (ಜೂನ್ 19) ತೀರ್ಪು ಕಾಯ್ದಿರಿಸಿದೆ. ಅರೇಂಜ್ ಮ್ಯಾರೇಜ್ ಮಾಡಿಕೊಂಡಿದ್ದ ಅಖಿಲಾ ಮತ್ತು ಧನಂಜಯ್ ಅವರು ಈಗ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!