ಚಾಮರಾಜನಗರ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ.

ಮೈಸೂರು : ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ಆನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ”, ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ, “ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್ ಪೂರೈಸಲು ಯಾವುದೇ ಸರ್ಕಾರ 42 ಕೋಟಿ ರೂ.ಗಳನ್ನು ಖರ್ಚು ಮಾಡುವುದು ತೀರಾ ವಿರಳ. ಆದರೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಆದಾಯದ ಬಗ್ಗೆ ಯಾವುದೇ ವಿಳಂಬ ಮಾಡದೆ, ಮೂಲಭೂತ ಹಕ್ಕು ಎಂದು ಪರಿಗಣಿಸಿ ವಿದ್ಯುತ್ ಪೂರೈಸಲು ಒಪ್ಪಿಗೆ ನೀಡಿದರು. ಆದರೆ, ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು”, ಎಂದು ಸಭೆಯಲ್ಲಿ ತಿಳಿಸಿದರು.

https://www.youtube.com/live/mh2ZIFitrE4?si=nXoM9f7F9UerdXnn   ರೀಲ್ಸ್ ಮಾಡಿ, ದಾರವಾಹಿ ನೋಡಿದ್ರೂ RANK ಬಂದ ಯುವತಿ.  ನನ್ಗೆ ಸೈನ್ ಮಾಡೋಕೆ ಬರೋಲ್ಲ ಮಗ್ಳು RANK ಬಂದ್ಲು,

“ಜಿಲ್ಲೆಯ ಶೇ.52ರಷ್ಟು ಭೂಪ್ರದೇಶ ಅರಣ್ಯ ಪ್ರದೇಶದಿಂದ ಕೂಡಿರುವ ಕಾರಣ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅರಣ್ಯ ಇಲಾಖೆ ವತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಿದೆ. ಆದರೂ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ನೀಡಿರುವುದು ನಮಗೆ ಸಿಕ್ಕಿರುವ ದೊಡ್ಡ ಯಶಸ್ಸು. ಈಗ ಉಳಿದ ಹಾಡಿಗಳಿಗೂ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮವನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಮುಂದಿನ ಮೂರು ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಸಬೇಕಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು”, ಎಂದು ತಿಳಿಸಿದರು.

ಉಳಿದಂತೆ ಜಿಲ್ಲೆಯಲ್ಲಿ ಗೃಹಜ್ಯೋತಿ, ಗಂಗಾ ಕಲ್ಯಾಣ, ಕುಸುಮ್-ಬಿ, ಕುಸುಮ್-ಸಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸೆಸ್ಕ್ ವತಿಯಿಂದ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕೆಲಸಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ ಶಾಖೆ) ಶರಣಮ್ಮ ಎಸ್. ಜಂಗಿನ್, ಪ್ರಧಾನ ವ್ಯವಸ್ಥಾಪಕರು(ಆ ಮತ್ತು ಮಾ. ಸಂ) ಬಿ.ಆರ್. ರೂಪ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ಆಂತರಿಕ ಪರಿಶೋಧನೆ) ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರು(ಖರೀದಿ) ಎಲ್. ಲೋಕೇಶ್, ಚಾಮರಾಜನಗರ-ಕೊಡಗು ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್(ವಿ) ಸೋಮಶೇಖರ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!