ಚಿಲ್ಲರೆ ಕಾಸಿನಲ್ಲಿ ಪತ್ನಿಗೆ ಮಂಗಳಸೂತ್ರ ಖರೀದಿಸಲು ಬಂದ ವೃದ್ಧ, ಮಂಗಳಸೂತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಂಗಡಿಯ ಮಾಲೀಕ….

ಈಗಿನ ಕಾಲದಲ್ಲಿ ದುಡ್ಡಿಗೆ ಬೆಲೆ, ಯಾರಿಗಾದ್ರೂ ದುಡ್ಡು ಕೊಟ್ಟಿದ್ದರೆ ಒಂದು ರೂಪಾಯಿ ಬಿಡದೇ ವಸೂಲಿ ಮಾಡುವ ಕಾಲದಲ್ಲಿ ನಾವಿದ್ದೇವೆ. ಆದರೆ ಇದಕ್ಕೆ ತದ್ವಿರುದ್ಧವಾದ ಘಟನೆಯೂ ನಡೆದಿದೆ. ವೃದ್ಧ ದಂಪತಿಯ ಶುದ್ಧ ಪ್ರೀತಿ ಹಾಗೂ ಚಿನ್ನದಂಗಡಿ ಮಾಲೀಕನ ಹೃದಯವಂತಿಕೆಗೆ ಈ ವಿಡಿಯೋ ಸಾಕ್ಷಿಯಾಗಿದೆ. ಮಾಂಗಲ್ಯ ಖರೀದಿಸಲು ಚಿನ್ನದಂಗಡಿಗೆ ಬಂದ ದಂಪತಿಯ ಬಳಿ, ಅಂಗಡಿ ಮಾಲೀಕನು ಕೇವಲ 20 ರೂ ಸ್ವೀಕರಿಸುವ ಮೂಲಕ ಹೃದಯವಂತಿಕೆ ಮೆರೆದಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ವ್ಯಕ್ತಿಯ ಒಳ್ಳೆತನವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಚಿನ್ನದ ಬೆಲೆ ಗಗನಕ್ಕೆ ಏರುತ್ತಿದೆ, ಹೀಗಾಗಿ ಆಭರಣವನ್ನು ದೂರದಿಂದ ನೋಡಿಯೇ ಖುಷಿ ಪಡಬೇಕು. ಈಗಿನ ಕಾಲದಲ್ಲಿ ಆಭರಣ ಖರೀದಿ ಮಾಡುವುದೆಂದರೆ ಮಧ್ಯಮ ಹಾಗೂ ಬಡವರ್ಗದ ಜನರಿಗೆ ಕನಸೇ ಸರಿ. ಆಭರಣ ಎಷ್ಟೇ ದುಬಾರಿಯಾಗಿರಲಿ ಈ ಹೆಣ್ಣು ಮಕ್ಕಳು ತಮ್ಮ ಪತಿ ಉಡುಗೊರೆಯಾಗಿ ಆಭರಣ ನೀಡಿದರೆ ಖುಷಿ ಪಡುತ್ತಾರೆ. ವೃದ್ಧ ವ್ಯಕ್ತಿಯೊಬ್ಬನು ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಆಭರಣದ ಅಂಗಡಿಗೆ ಕರೆದುಕೊಂಡು ಬಂದಿದ್ದಾನೆ. ಆದರೆ ಅಂಗಡಿ ಮಾಲೀಕನು ಈ ದಂಪತಿಯ ಕಷ್ಟವನ್ನು ಅರಿತು ಇವರಿಂದ 20 ರೂಪಾಯಿ ಸ್ವೀಕರಿಸುವ ಮೂಲಕ ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ಘಟನೆಯೂ ಮಹಾರಾಷ್ಟ್ರದ ಸಂಭಾಜಿನಗರದ ಗೋಪಿಕಾ ಜ್ಯುವೆಲ್ಲರ್ಸ್ನಲ್ಲಿ ನಡೆದಿದೆ ಎನ್ನಲಾಗಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದುಕೊಂಡಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ 93 ವರ್ಷದ ವೃದ್ಧನು ಆಭರಣ ಖರೀದಿಸಲು ತನ್ನ ಮಡದಿಯೊಂದಿಗೆ ಆಭರಣದ ಅಂಗಡಿಗೆ ಬಂದಿದ್ದಾನೆ. ಅವರು ತೊಟ್ಟ ಉಡುಗೆಯೇ ಅವರ ಆರ್ಥಿಕ ಸ್ಥಿತಿ ಹೇಗಿದೆ ಎನ್ನುವುದನ್ನು ಸೂಚಿಸುತ್ತದೆ. ಅಂಗಡಿಗೆ ಬಂದ ಈ ವೃದ್ಧ ದಂಪತಿಗಳು ಹಾರ ಮತ್ತು ಮಂಗಳಸೂತ್ರವನ್ನು ಖರೀದಿಸಲು ಮುಂದಾಗುತ್ತಾರೆ. ಇವರಿಬ್ಬರ ಪ್ರೀತಿ ಬಾಂಧವ್ಯವನ್ನು ನೋಡಿದ ಚಿನ್ನದ ಅಂಗಡಿ ಮಾಲೀಕನು ಅವರೊಂದಿಗೆ ಸಂಭಾಷಣೆಗೆ ಇಳಿದಿದ್ದಾನೆ. ಈ ವೇಳೆಯಲ್ಲಿ ನಿಮ್ಮ ಬಳಿ ಹಣ ಎಷ್ಟಿದೆ ಎಂದು ಕೇಳಿದ್ದು, ವೃದ್ಧ ಮಹಿಳೆ 1,120 ರೂ. ಹಣವನ್ನು ತೋರಿಸುತ್ತಿರುವುದನ್ನು ನೋಡಬಹುದು.ಅವರ ಆರ್ಥಿಕ ಸ್ಥಿತಿ ಹಾಗೂ ಕಷ್ಟವನ್ನು ಅರಿತ ಅಂಗಡಿ ಮಾಲೀಕನು “ಇಷ್ಟು ಹಣ?” ಎಂದಿದ್ದಾನೆ. ಆ ವ್ಯಕ್ತಿಯ ಮಾತಿನ ದಾಟಿಯನ್ನು ಅರಿತ ವೃದ್ಧ ಚೀಲಕ್ಕೆ ಕೈ ಹಾಕಿ ನಾಣ್ಯ ತುಂಬಿದ ಗಂಟನು ತೆಗೆದುಕೊಡುತ್ತಾನೆ. ಈ ವೇಳೆಯಲ್ಲಿ ಅಂಗಡಿ ಮಾಲೀಕನು ವೃದ್ಧ ಮಹಿಳೆಯೂ ನೀಡಿದ ಹಣವನ್ನು ಆಕೆಗೆ ಹಿಂದಿರುಗಿಸಿ, ಇದು ಪ್ರೀತಿಯ ಉಡುಗೊರೆ ಎಂದು ಹೇಳಿ ಈ ಆಭರಣಕ್ಕೆ ತಲಾ 20 ರೂ ಹಾಗೂ 10 ರೂ ಮಾತ್ರ ವಿಧಿಸಿರುವುದಾಗಿ ಹೇಳಿರುವುದನ್ನು ನೋಡಬಹುದು. ಹೀಗೆನ್ನುತ್ತಿದ್ದಂತೆ ಈ ವೃದ್ಧ ದಂಪತಿಗಳು ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ.

 

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!