ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್!

ಬೆಂಗಳೂರು :- ಅ*ಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅ*ಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅ*ಚಾರಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೇ ಪ್ರಜ್ವಲ್ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿತ್ತು.
ಅ*ಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು.
ಪ್ರಕರಣದ ಹಿನ್ನೆಲೆ
ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದ್ದು, ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಕೆಲ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!