ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….

ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ ಆಗಿರುತ್ತದೆ. ಈ ನಿಯಮ ಜುಲೈ 2 ರಿಂದ ಜಾರಿಗೆ ಬರುತ್ತದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಆ ಪ್ರಕಾರ, ಟೆಸ್ಟ್ ಕ್ರಿಕೆಟ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಜಾರಿಗೆ ತಂದಿದ್ದ ಐಸಿಸಿ, ಇದೀಗ ಟಿ20 ಕ್ರಿಕೆಟ್ನ ನಿಯಮದಲ್ಲೂ ಒಂದು ಬದಲಾವಣೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ ಸಾಕಷ್ಟು ಮನ್ನಣೆಗಳಿಸುತ್ತಿದೆ. ಪ್ರತಿ ದೇಶಗಳು ಸಹ ಟಿ20 ಲೀಗ್ಗಳನ್ನು ಆಯೋಜಿಸುವ ಮೂಲಕ ಜನರನ್ನು ಕ್ರಿಕೆಟ್ನತ್ತ ಸೆಳೆಯುತ್ತಿವೆ. ಇದನ್ನು ಅರಿತುಕೊಂಡಿರುವ ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳ ಪವರ್ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಐಸಿಸಿ ತಂದಿರುವ ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್ನ ಓವರ್ಗಳನ್ನು ಕಡಿಮೆ ಮಾಡಿದರೆ, ಪವರ್ಪ್ಲೇ ಓವರ್ಗಳನ್ನು ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, 20 ಓವರ್ಗಳ ಇನ್ನಿಂಗ್ಸ್ನಲ್ಲಿ ಮೊದಲ 6 ಓವರ್ಗಳು ಪವರ್ಪ್ಲೇ ಆಗಿದ್ದವು. ಈ 6 ಓವರ್ಗಳಲ್ಲಿ ಫೀಲ್ಡಿಂಗ್ ಮಾಡುತ್ತಿರುವ ತಂಡವು 30 ಯಾರ್ಡ್ ವೃತ್ತದ ಹೊರಗೆ ಇಬ್ಬರಿಗಿಂತ ಹೆಚ್ಚು ಫೀಲ್ಡರ್ಗಳನ್ನು ಇರಿಸುವಂತಿಲ್ಲ. ಆ ಬಳಿಕ ಅಂದರೆ 6 ಓವರ್ ಮುಗಿದ ನಂತರ ಉಳಿದ ಓವರ್ಗಳಲ್ಲಿ, 30 ಯಾರ್ಡ್ ವೃತ್ತದ ಹೊರಗೆ ಐದು ಫೀಲ್ಡರ್ಗಳನ್ನು ನಿಲ್ಲಿಸಬಹುದು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!