ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು….

ರೈತರ ಗೋಳು ಕೇಳುವವರು ಯಾರು ಎಂಬ ಪರಿಸ್ಥಿತಿಗೆ ತಲುಪಿದೆ ಕರ್ನಾಟಕದ ರೈತರ ಪರಿಸ್ಥಿತಿ. ಅದಕ್ಕೆ ನಿದರ್ಶನದಂತೆ ಕರ್ನಾಟಕದಲ್ಲಿ ಟಮೋಟ ದರವು ಏಕಾಏಕಿ ಕುಸಿತವಾಗಿದೆ. : ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ ಕೇವಲ 50 ರೂ.ಗೆ ಮಾರಾಟವಾಗುತ್ತಿದೆ. ಬೆಳೆಗೆ ಹೆಚ್ಚಿನ ವೆಚ್ಚವಾಗಿದ್ದರೂ, ಕಡಿಮೆ ದರದಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಬದನೆಕಾಯಿ ಮತ್ತು ನುಗ್ಗೆಕಾಯಿ ದರಗಳೂ ಕುಸಿದಿವೆ. ಸರ್ಕಾರದ ವಿರುದ್ಧ ರೈತರು ಕಿಡಿಕಾರಿದ್ದಾರೆ. ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ. ದರ ಕುಸಿತಕ್ಕೆ ಗದಗ ಎಪಿಎಂಸಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ದರಗಳು ಏರಿಕೆಯಾದರೂ ರೈತರು ಬೆಳೆದ ಬೆಳೆಗಳ ದರ ಏಕೆ ಏರಿಕೆಯಾಗುತ್ತಿಲ್ಲ ಅಂತ ಕಿಡಿಕಾರಿದ್ದಾರೆ. ಅಷ್ಟಕ್ಕೂ ಅನ್ನ ನೀಡುವ ಅನ್ನದಾತನಿಗೆ ಸರಿಯಾದ ಬೆಲೆ ಸಿಗಲಿಲ್ಲವಾದರೆ ದೇಶ ಅಭಿವೃದ್ಧಿಯಾಗುವುದು ಖಂಡಿತವಾಗಿಯೂ ಕಷ್ಟವಾಗಿದೆ.

ಮಾರುಕಟ್ಟೆಗೆ ಹೆಚ್ಚು ಫಸಲು ಬಂದಿದ್ದರಿಂದ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 25 ಕೆಜಿ ಟ್ರೇ ಕೇವಲ 50 ರೂ. ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ 20-30 ರೂ. ಕೆಜಿ ಟೊಮೆಟೊ ಮಾರಾಟವಾಗುತ್ತಿದ್ದರು, ರೈತರಿಗೆ ಕೆಜಿ ಕೇವಲ 2 ರೂ. ಸಿಗುತ್ತಿದೆ. ರೈತರಿಗಾಗುತ್ತಿರುವ ಈ ಅನ್ಯಾಯ ತಿಳಿದಿದ್ದರೂ ಎಪಿಎಂಸಿ ಅಧಿಕಾರಿಗಳು ಮೌನವಾಗಿದ್ದಾರೆ. ಬದನೆಕಾಯಿ, ನುಗ್ಗೆಕಾಯಿ ಬೆಲೆಯೂ ಕುಸಿತವಾಗಿದೆ. ಒಂದು ಟ್ರೇ ಬದನೆಕಾಯಿಗೆ 50 ರಿಂದ 80 ರೂ ಬೆಲೆ ಇದೆ. ನುಗ್ಗೆಕಾಯಿ ಒಂದು ಕೆಜಿಗೆ 10 ರೂ ಮಾರಾಟವಾಗುತ್ತಿದೆ. ಇನ್ನು ಒಂದು ಟ್ರೇ ಟೊಮೆಟೊ ಮಾರುಕಟ್ಟೆಯಲ್ಲಿ 50 ರೂ. ಮಾರಾಟವಾಗುತ್ತಿದೆ. ರೈತರು ಎಕರೆಗೆ 30-50 ಸಾವಿರ ರೂ ಮಾಡಿರುವ ಖರ್ಚು ಕೂಡ ವಾಪಸ್ ಬರಿತ್ತಿಲ್ಲ. ಸಾಮಾನ್ಯ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೂ ಕಷ್ಟಪಟ್ಟು ಬೆಳೆದ ರೈತನಿಗೆ ಸಿಗುತ್ತಿಲ್ಲ. ಬದಲಾಗಿ ಇದು ಮಧ್ಯವರ್ತಿಗಳಿಗೆ ಸೇರುತ್ತಿದೆ. ಕೃಷಿ ಅವರಂಬಿಕ ದೇಶವಾದ ಭಾರತದಲ್ಲಿ, ರೈತರಿಗೆ ಹೆಚ್ಚಿನ ಮನ್ನಣೆ ನೀಡುವಂತಾಗಲಿ ಎಂಬುದು ಎಲ್ಲರ ಮನವಿಯಾದರೂ ಸಹ, ಅಧಿಕಾರಿಗಳು ಇದರ ಬಗ್ಗೆ ಮೌನದಿಂದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದು ಟ್ರೇ ನಲ್ಲಿ ಸುಮಾರು 20-25 ಕೆಜಿ ಟೊಮೆಟೊ ಇರುತ್ತೆ. 2 ರೂ ಕೆಜಿಯಂತೆ ಟೊಮೆಟೊ ಮಾರಾಟವಾಗುತ್ತಿದ್ದು, ಸರ್ಕಾರ ಹಾಗೂ ಎಪಿಎಂಸಿ ವರ್ತಕರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಗೆ ಕ್ವಿಂಟಾಲ್ಗಟ್ಟಲೇ ಟೊಮೆಟೊ ತಂದರೂ ರೈತರ ಕೈ ಖಾಲಿ ಖಾಲಿ ಆಗಿದೆ.ಟೊಮೆಟೊ ಕಟಾವು ಮಾಡುವ ಕಾರ್ಮಿಕರಿಗೆ 300 ರೂ ದಿನ ಕೂಲಿ ಕೊಡಬೇಕು. ಮಾರುಕಟ್ಟೆಗೆ ಒಂದು ಟ್ರೇ ಹೇರಿಕೊಂಡು ಬಂದರೆ 30 ರೂ. ವಾಹನ ಬಾಡಿಗೆ ಇದೆ. ಜೊತೆಗೆ ದಲ್ಲಾಳಿಗೆ 10 ರೂ. ಕೊಡಬೇಕು. ಹಾಗಾಗಿ ಒಂದು ಟ್ರೇ ಗೆ ರೈತರಿಗೆ 10 ರೂ ಮಾತ್ರ ಸಿಗುತ್ತದೆ ಎಂದು ಕಿಡಿಕಾರಿದ್ದಾರೆ. ಆ 10 ರೂ ಟೀ, ತಿಂಡಿ ಮಾಡಿದರೆ ಖಾಲಿ ಕೈಯಲ್ಲಿ ಮನೆಗೆ ಹೋಗಬೇಕಾಗುತ್ತೆ ಎಂದು ಗೋಳಾಡಿದರು.

ಹಗಲು ರಾತ್ರಿ ಕಷ್ಟ ಪಟ್ಟು ಟೊಮೆಟೊ ಬೆಳೆದಿದ್ದೇವೆ. ಮಾರುಕಟ್ಟೆಗೆ ತಂದರೆ ಸೂಕ್ತ ದರ ಸಿಗುತ್ತಿಲ್ಲ ಹೀಗಾದರೆ ಕುಟುಂಬ ನಿರ್ವಹಣೆಗೆ ತುಂಬಾನೆ ತೊಂದರೆ ಆಗುತ್ತದೆ. ಸರ್ಕಾರ ಟೊಮೆಟೊ ಬೆಳೆದ ರೈತರ ನೆರವಿಗೆ ಬರಬೇಕು. ಸೂಕ್ತದ ದರ ನಿಗದಿ ಮಾಡಬೇಕೆಂದು ಒತ್ತಾಯಿಸಲಾಗಿದೆ. ಬೆಳೆದ ಬೆಳೆಗೆ ಸರಿಯಾದ ಫಲ ಸಿಗಲಿಲ್ಲವಾದರೆ ರೈತರು ಸಾಲದ ಮಡುವಿನಲ್ಲಿ ಬೀಳುತ್ತಾರೆ. ನಂತರ ತಮ್ಮ ಜೀವನದಲ್ಲಿ ಏರುಪೇರು ಆದಾಗ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಈ ರೀತಿ ಆಗಬಾರದೆಂದರೆ ಸರ್ಕಾರ ಹಾಗೂ ಎಪಿಎಂಸಿ ವರ್ತಕರು ಈ ವಿಷಯದ ಬಗ್ಗೆ ಕೂಡಲೇ ಗಮನಹರಿಸಬೇಕಾದದು ಪ್ರಮುಖವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!