ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ….

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ. ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!