ತಮ್ಮ ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನೆರವೇರಿಸಿದ ಅದಿತಿ ಪ್ರಭುದೇವ..…

ಚಂದನವನದ ಖ್ಯಾತ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಚಂದ್ರಕಾಂತ್ ಸಖತ್ ಖುಷಿಯಲ್ಲಿದ್ದಾರೆ. ಕಾರಣ ಅವರ ಮಗಳಾದಂತಹ ನೇಸರಾಳ ಮೊದಲ ವರ್ಷದ ಹುಟ್ಟು ಹಬ್ಬದ ಸಂಭ್ರಮ. ದಂಪತಿಗಳಿಬ್ಬರಿಗೂ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸುವುದೇ ಒಂದು ಹಬ್ಬವಾಗಿದೆ.

ಹೌದು, 2022ರಲ್ಲಿ ಉದ್ಯಮಿ ಯಶಸ್ಸು ಚಂದ್ರಕಾಂತ್ ಪಟ್ಲಾ ಅವರನ್ನು ಚಂದನವನದ ಮುದ್ದಾದ ನಟಿ ಅದಿತಿ ಪ್ರಭುದೇವ ವಿವಾಹವಾಗಿದ್ದರು. ಹೊಸ ವರ್ಷದ ದಿನವೇ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ಕೊಟ್ಟಿದ್ದರು. ಇದೀಗ ಆ ಸಂಭ್ರಮವನ್ನು ಆಚರಿಸಲು ಒಂದು ವರ್ಷದ ಮುದ್ದಾದ ಹೆಣ್ಣು ಮಗುವಿದೆ. ಯುಗಾದಿ ಹಬ್ಬದ ದಿನ ಅಂದರೆ ಏಪ್ರಿಲ್ 4ರಂದು ನಟಿ ಅದಿತಿ ಪ್ರಭುದೇವ ಅವರ ಮನೆಗೆ ಮುದ್ದಾದ ಮಗಳ ಆಗಮನವಾಗಿತ್ತು. ಯುಗಾದಿ ಹಬ್ಬದಂದು ತಾಯಿ ಆದ ಖುಷಿಯ ಜೊತೆಗೆ ನಮ್ಮ ಮನೆ ಮಹಾಲಕ್ಷ್ಮಿ ಅಂತಾ ಮಗುವಿನ ಫೋಟೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

ಇದೀಗ ನಟಿ ಅದಿತಿ ಪ್ರಭುದೇವ ಅವರ ಮುದ್ದಾದ ಮಗಳು ನೇಸರ ಹುಟ್ಟು ಹಬ್ಬದ ಖುಷಿಯಲ್ಲಿದ್ದಾಳೆ. ಮಗಳ ಸಂಭ್ರಮವನ್ನು ಪೋಷಕರು ದುಪ್ಪಟ್ಟು ಮಾಡಿದ್ದಾರೆ. ಅಲ್ಲದೇ ಮಗಳ ಬರ್ತ್ ಡೇಯನ್ನು ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ನಲ್ಲಿ ಸಖತ್ ಗ್ರ್ಯಾಂಡ್ ಆಗಿ ಮಾಡಿದ್ದಾರೆ.ಇನ್ನೂ, ನಿನ್ನೆ ಅದಿತಿ ಪ್ರಭುದೇವ ಮಗಳು ನೇಸರ ಹುಟ್ಟು ಹಬ್ಬಕ್ಕೆ ಸಾಕಷ್ಟು ತಾರೆಯರು ಭಾಗಿಯಾಗಿ ಪಾರ್ಟಿಗೆ ಮೆರಗು ತುಂಬಿದ್ದಾರೆ. ಅದಿತಿ ಪ್ರಭುದೇವ್ ಮಗಳ ಬರ್ತ್ ಡೇಗೆ ನಟಿಯರಾದ ಮಿಲನಾ ನಾಗರಾಜ್ ಹಾಗೂ ಅಮೃತಾ ಅಯ್ಯಂಗಾರ್ ಭಾಗಿಯಾಗಿದ್ದರು. ನೆನಪಿರಲಿ ಪ್ರೇಮ್ ಮತ್ತು ಮಗಳು ಅಮೃತಾ ಕೂಡ ಬಂದಿದ್ದರು ಇಷ್ಟೇ ಅಲ್ಲದೇ ನಟಿ ಮೇಘನಾ ರಾಜ್ ಹಾಗೂ ಮಗ ರಾಯನ್ ರಾಜ್ ಕೂಡ ಭಾಗಿಯಾಗಿ ಖುಷಿಪಟ್ಟಿದ್ದಾರೆ. ಹಿಟ್ಲರ್ ಕಲ್ಯಾಣ ಮಲೈಕಾ ಹಾಗೂ ಗುರುಕಿರಣ್ ಅವರು ಹಾಡು ಹಾಡಿ ಮನರಂಜನೆ ನೀಡಿದ್ದಾರೆ.

ಅವರ ಮಗಳ ಹುಟ್ಟು ಹಬ್ಬದಿಂದ, ಕನ್ನಡ ಚಿತ್ರರಂಗದ ಹಲವಾರು ತಾರೆಗಳು ಬಂದಿರುವುದು ಅವರಿಗೆ ಸಂತೋಷ ದುಪ್ಪಟ್ಟಾದಂತಿದೆ. ಒಟ್ಟಿನಲ್ಲಿ ಮುದ್ದು ಹೆಣ್ಣು ಮಗುವಿನ ಜೀವನ ಸುಂದರವಾಗಿರಲಿ ಎಂದು ಹರಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ತಿಳಿಸಿ ಸಂಭ್ರಮವನ್ನು ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ ಹಾಗೂ ಯಶಸ್ ಪಾಟ್ಲ.

 

 

 

 

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!