ತಮ್ಮ ಸಂಗಾತಿಗಳಿಗೆ ಬಲು ನಿಷ್ಠೆಯಿಂದಿರುವ ಜೀವಿಗಳಿವು;

ಹೌದು ವೀಕ್ಷಕರೇ, ಮನುಷ್ಯರೇ ಆಗಿರಲಿ ಅಥವಾ ಪ್ರಾಣಿಗಳೇ ಆಗಿರಲಿ ಪ್ರೀತಿಯಲ್ಲಿ ಆಕರ್ಷಣೆ ಕಳೆದುಕೊಂಡಾಗ ಇನ್ನೊರ್ವರತ್ತ ಆಕರ್ಷಿತರಾಗುವುದು ಆಶ್ಚರ್ಯವೇನಲ್ಲ. ಅದರಲ್ಲೂ ಇಂದಿನ ಆಧುನಿಕ ಯುಗದಲ್ಲಿ ಮನುಷ್ಯರಲ್ಲಿ ಪ್ರೀತಿ, ಪ್ರೇಮ, ಸಂಬಂಧಕ್ಕೆ ಬೆಲೆಯೇ ಇಲ್ಲದಂತಾಗಿದೆ. ಡಿವೋರ್ಸ್, ಪ್ರೀತಿಯಲ್ಲಿ ಮೋಸ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಆದ್ರೆ ಈ ಕೆಲವೊಂದಿಷ್ಟು ಜೀವಿಗಳು ಪ್ರೀತಿಯಲ್ಲಿ ತಮ್ಮ ಸಂಗಾತಿಗೆ ಜೀವನದುದ್ದಕ್ಕೂ ತುಂಬಾನೇ ನಿನಿಷ್ಠೆಯಿಂದ ಇರುತ್ತವಂತೆ. ಒಂದು ವೇಳೆ ತನ್ನ ಸಂಗಾತಿ ಸಾವನ್ನಪ್ಪಿದರೆ ಆ ಜೀವಿ ಒಂಟಿಯಾಗಿಯೇ ಜೀವನಪರ್ಯಂತ ಬದುಕುತ್ತವಂತೆ. ಹಾಗಿದ್ರೆ ತಮ್ಮ ಸಂಗಾತಿಗೆ ತುಂಬಾನೇ ನಿಷ್ಠವಾಗಿರುವ ಜೀವಿಗಳು ಯಾವುದೆಂಬುದನ್ನು ನೋಡೋಣ ಬನ್ನಿ.

ಹಂಸಗಳು: ಹಂಸ ಜೋಡಿಗಳನ್ನು ಪ್ರೀತಿಯ ನಿಜವಾದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಒಂದು ಹಂಸವು ಇನ್ನೊಂದರೊಂದಿಗೆ ಜೋಡಿಯಾದ ನಂತರ, ಅವು ಒಟ್ಟಿಗೆ ಗೂಡುಗಳನ್ನು ನಿರ್ಮಿಸುತ್ತವೆ, ಮಕ್ಕಳನ್ನು ಒಟ್ಟಿಗೆ ಬೆಳೆಸುತ್ತವೆ ಮತ್ತು ಪೋಷಕರ ಕರ್ತವ್ಯಗಳನ್ನು ಹಂಚಿಕೊಳ್ಳುತ್ತವೆ .

ತೋಳಗಳು: ತೋಳಗಳು ಅಪಾಯಕಾರಿಯಾಗಿ ಕಾಣುತ್ತವೆ, ಆದರೆ ಅವುಗಳು ಪ್ರೀತಿಯ ವಿಚಾರದಲ್ಲಿ ತುಂಬಾನೇ ಸೌಮ್ಯವಾಗಿರುತ್ತವೆ. ಅವುಗಳು ತಮ್ಮ ಕುಟುಂಬ ಮತ್ತು ಸಂಗಾತಿಗೆ ಬಹಳ ನಿಷ್ಠವಾಗಿರುತ್ತವೆ.

ಬೋಳು ಹದ್ದು: ಅಮೆರಿಕ ರಾಷ್ಟ್ರೀಯ ಪಕ್ಷಿಯಾದ ಬೋಳು ಹದ್ದುಗಳು ತಮ್ಮ ಸಂಗಾತಿಗೆ ತುಂಬಾನೇ ನಿಷ್ಠವಾಗಿರುತ್ತವೆ. ಒಮ್ಮೆ ಅವು ಸಂಗಾತಿಯನ್ನು ಆರಿಸಿಕೊಂಡರೆ, ಅವು ಜೀವನಪರ್ಯಂತ ಒಂದೇ ಸಂಗಾತಿಯ ಜೊತೆಗೆ ಜೀವಿಸುತ್ತವೆ.

ಪೆಂಗ್ವಿನ್: ಪೆಂಗ್ವಿನ್ಗಳು ತಮ್ಮ ಜೀವನದುದ್ದಕ್ಕೂ ಒಂದೇ ಸಂಗಾತಿಯೊಂದಿಗೆ ಇರುತ್ತವೆ. ಅವುಗಳು ಒಟ್ಟಿಗೆ ಮರಿಗಳನ್ನು ನೋಡಿಕೊಳ್ಳುತ್ತವೆ. ಪೆಂಗ್ವಿನ್ಗಳ ನಡುವಿನ ಪ್ರೀತಿಯ ಭಾವನೆ ತುಂಬಾ ಪ್ರಬಲವಾಗಿರುತ್ತದೆ.

ಬೀವರ್ಗಳು: ಬೀವರ್ಗಳನ್ನು ವಿಶ್ವದ ಅತ್ಯಂತ ಶ್ರಮಶೀಲ ಪ್ರಾಣಿಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಅತ್ಯುತ್ತಮ ಎಂಜಿನಿಯರ್ ಅಂತಲೇ ಹೆಸರುವಾಸಿಯಾಗಿರುವ ಈ ಪುಟ್ಟ ಬೀವರ್ಗಳು ಪ್ರೀತಿ, ಸಂಬಂಧದ ವಿಚಾರದಲ್ಲೂ ತುಂಬಾನೇ ನಿಷ್ಠವಾಗಿರುತ್ತವೆ.

ಗಿಬ್ಬನ್ಸ್: ಮಂಗನ ಜಾತಿಗೆ ಸೇರಿದ ಈ ಪ್ರಾಣಿಗಳು ತಮ್ಮ ಸಂಗಾತಿಗಳೊಂದಿಗೆ ನಿಕಟ ಬಂಧಗಳನ್ನು ಸೃಷ್ಟಿಸುತ್ತವೆ. ಅವು ತಮ್ಮ ಮರಿಗಳನ್ನು ಒಟ್ಟಿಗೆ ಬೆಳೆಸುತ್ತವೆ ಮತ್ತು ಹೆಚ್ಚಿನ ಸಮಯವನ್ನು ತಮ್ಮ ಸಂಗಾತಿಯೊಂದಿಗೆ ಕಳೆಯುತ್ತವೆ. ತಮ್ಮ ಸಂಗಾತಿ ಸತ್ತರೆ ಒಂಟಿಯಾಗಿ ವಾಸಿಸುತ್ತವೆ.

 

 

 

 

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!