ದರ್ಶನ್ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಲು ಬೆನ್ನತ್ತಿದ್ದ ಲೇಡಿ ಫ್ಯಾನ್ಸ್.

ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಅಭಿಮಾನಿಗಳ ಒತ್ತಡ ಹೆಚ್ಚಿನ ಸಮಸ್ಯೆಯಾಗಿದೆ. ಅವರ ಆರೋಗ್ಯದ ಬಗ್ಗೆ ಚಿಂತಿಸದ ಅಭಿಮಾನಿಗಳು ನಿರಂತರವಾಗಿ ಸೆಲ್ಫಿ ಮತ್ತು ಆಶೀರ್ವಾದಕ್ಕಾಗಿ ಮುಗಿಬೀಳುತ್ತಿದ್ದಾರೆ. ಬೆನ್ನು ನೋವಿನಿಂದ ತೊಂದರೆ ಅನುಭವಿಸುತ್ತಿರುವ ದರ್ಶನ್ ಅವರು ಈ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ತಿಂಗಳ ಕಾಲ ಜೈಲಿನಲ್ಲಿ ಇದ್ದ ದರ್ಶನ್ ಅವರಿಗೆ ತೀವ್ರವಾಗಿ ಬೆನ್ನುನೋವು ಕಾಣಿಸಿಕೊಂಡಿತು. ಈಗ ಹೊರ ಬಂದರೂ ಬೆನ್ನು ನೋವು ಮುಂದುವರಿದಿದೆ. ಅವರು ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಾ ಇದ್ದಾರೆ. ದರ್ಶನ್ (Darshan) ಇನ್ನೂ ಸರಿಯಾಗಿ ರಿಕವರಿ ಆಗದ ಕಾರಣ ಶೂಟಿಂಗ್ನಲ್ಲೂ ಭಾಗಿ ಆಗಲು ಸಾಧ್ಯವಾಗುತ್ತಿಲ್ಲ. ಹೀಗಿರುವಾಗಲೇ ಅವರಿಗೆ ಅಭಿಮಾನಿಗಳಿಂದಲೇ ಸಮಸ್ಯೆ ಆಗುತ್ತಿದೆ. ಈ ಬಗ್ಗೆ ಅವರು ಓಪನ್ ಆಗಿ ಅಸಮಾಧಾನ ಹೊರಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.


ದರ್ಶನ್ ಅವರು ಎಲ್ಲೇ ತೆರಳಿದರೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಅವರ ಮನೆಯ ಹೊರಗೆ ನಿತ್ಯ ಸಾಕಷ್ಟು ಫ್ಯಾನ್ಸ್ ದರ್ಶನ್ನ ನೋಡಲು ಕಾತುರದಿಂದ ಕಾಯುತ್ತಾ ಇರುತ್ತಾರೆ. ಮೊದಲಾಗಿದ್ದರೆ ದರ್ಶನ್ ಅವರು ತಾಳ್ಮೆಯಿಂದ ಸೆಲ್ಫಿ ನೀಡುತ್ತಿದ್ದರು. ಅಭಿಮಾನಿಗಳನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಆದರೆ, ಈಗ ದರ್ಶನ್ ಅವರಿಗೆ ಬೆನ್ನು ನೋವಿನಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ಅವರಿಗೆ ಸರಿಯಾಗಿ ನಿಲ್ಲಲೂ ಸಾಧ್ಯವಾಗುತ್ತಿಲ್ಲ. ಆದರೆ ಇದನ್ನು ಫ್ಯಾನ್ಸ್ ಅರ್ಥಮಾಡಿಕೊಳ್ಳುತ್ತಿಲ್ಲ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!