ದಲಿತ ಬಾಲಕಿಯ ಮೇಲೆ *ಗಿಕ ದೌರ್ಜನ್ಯ : 59 ಮಂದಿ ಆರೋಪಿಗಳ – ಪೈಕಿ 57 ಮಂದಿ ಬಂಧನ!

ಪತ್ತನಂತಿಟ್ಟ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ – ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ – ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾ ದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ್ಲಾ ಆರೋಪಿಗಳನ್ನು ಸಮಗ್ರ ತನಿಖೆಯ ಮೂಲಕ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ.ಜಿ. ವಿನೋದ್ ಕುಮಾ‌ರ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೊನೆಯ ಆರೋಪಿ 25 ವರ್ಷದ ಯುವಕನನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಸಮೀಪದಲ್ಲಿಯೇ ಬಂಧಿಸಲಾಗಿದೆ. ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.
ಆರೋಪಿಗಳ ಹೇಳಿಕೆ ಆಧರಿಸಿ ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಲ್ಲಿ ಐವರು ಅಪ್ರಾಪ್ತರು ಕೂಡ ಇದ್ದಾರೆ. ತನಿಖೆ ಪೂರ್ಣ ಗೊಳಿಸಿ ಆದಷ್ಟು ಬೇಗ ದೋಷಾರೋಪ ಪಟ್ಟಿ ಸಲ್ಲಿಸುವುದು ಪೊಲೀಸ್ ತಂಡದ ಉದ್ದೇಶವಾಗಿದೆ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪತ್ತನಂತಿಟ್ಟದ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವು ಆರೋಪಿಗಳು ಬಾಲಕಿಯನ್ನು ಭೇಟಿಯಾ ಗಿದ್ದು, ನಂತರ ಆಕೆಯನ್ನು ವಾಹನಗಳಲ್ಲಿ ವಿವಿಧ ಸ್ಥಳಗಳಿಗೆ ಕರೆದೊಯ್ದು ದೌರ್ಜನ್ಯವೆಸಗಿರುವುದು ಇವರೆಗಿನ ತನಿಖೆಯಿಂದ ತಿಳಿದುಬಂದಿದೆ.
ಕಳೆದ ವರ್ಷ ಹನ್ನೆರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವಕನೊಬ್ಬ ರಾಗ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು ಇತರ ಮೂವರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ.
2024 ರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಥನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಡೆದ ಘಟನೆಗಳು ಸೇರಿದಂತೆ ಐದು ಸಂದರ್ಭಗಳಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಈಗ 18 ವರ್ಷ ತುಂಬಿರುವ ಯುವತಿ 13 ವರ್ಷದಿಂದ 62 ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಆಕೆಯ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಗಳ ಸಮಿತಿಗೆ ತಿಳಿಸಿದೆ. ನಂತರ ಸಮಿತಿಯು ಪೊಲೀಸರೆಯೂಚನೆ ನೀಡಿದ್ದು, ತನಿಖೆ ನಡೆಯುತ್ತಿದೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!