ದಿವ್ಯಾಂಗ ವಿದ್ಯಾರ್ಥಿಯ ಬಾಯೊಳಗೆ ಮೆಣಸಿನಕಾಯಿ ತುರುಕಿ ಶಿಕ್ಷಕ ಚಿತ್ರಹಿಂಸೆ ನೀಡಿದ್ದಾನೆ…!

ದಿವ್ಯಾಂಗ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ನಾನಾ ರೀತಿಯಲ್ಲಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶುಭಂ ಸಕ್ಸೇನಾನನ್ನು ಬಂಧಿಸಲಾಗಿದೆ. ಸೆಕ್ಟರ್ -49 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅನುಜ್ ಕುಮಾರ್ ಸೈನಿ ಇದನ್ನು ದೃಢಪಡಿಸಿದ್ದಾರೆ.

ನಿವಾಸಿಯೊಬ್ಬರು ತಮ್ಮ ಮಗನಿಗೆ ಮಾತು ಬರುತ್ತಿರಲಿಲ್ಲ ಎಂದು ಶಾಲೆ, ಕಾಲೇಜುಗಳಿಗೆ ಕಳುಹಿಸಿ ಶಿಕ್ಷಣಕೊಡಿಸಲು ಸಾಧ್ಯವಿಲ್ಲವೆಂದು ,ಶಹಜಹಾನ್ಪುರದ ನಿವಾಸಿ ಶುಭಂ ಸಕ್ಸೇನಾ ಅವರನ್ನು ಅವರ ಮನೆಯಲ್ಲಿ ಶಿಕ್ಷಕರಾಗಿ ಇರಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ, ಶುಭಂ ಶಿಕ್ಷಣವನ್ನು ನೀಡುತ್ತಿದ್ದರು. ಏಪ್ರಿಲ್ 24 ರಂದು, ಶುಭಂ ತನ್ನ ಮಗನಿಗೆ ಹೇಗೆ ಪಾಠ ಮಾಡುತ್ತಿದ್ದಾನೆಂದು ನೋಡಲು ಕೋಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಶುಭಂ ತನ್ನ ಮಗನನ್ನು ಹೊಡೆಯುತ್ತಿರುವುದನ್ನು ನೋಡಿ ಬೆರಗಾಗಿದ್ದಾರೆ.

ಶಿಕ್ಷಕ ಶುಭಂ ವಿದ್ಯಾರ್ಥಿಯ ಬೆರಳುಗಳ ಮಧ್ಯೆ ಪೆನ್ ಇಟ್ಟು ಒತ್ತುತ್ತಿದ್ದ, ಬಾಯಿ ತೆರೆಯುವಂತೆ ಒತ್ತಾಯಿಸಿ ಹೊಡೆಯುತ್ತಿದ್ದ, ಮೆಣಸಿನಕಾಯಿ ತಿನ್ನಿಸುತ್ತಿದ್ದ. ಅವನು ಬಲವಂತವಾಗಿ ವಿದ್ಯಾರ್ಥಿಯ ಬಾಯಿಗೆ ಮೆಣಸಿನಕಾಯಿಗಳನ್ನು ತುಂಬುತ್ತಿದ್ದನು. ಅವನು ಅವನಿಗೆ ಕೆಲವು ಔಷಧಿಗಳನ್ನು ಸಹ ನೀಡುತ್ತಿದ್ದ ಎನ್ನುವುದು ತಿಳಿದುಬಂದಿದೆ. ಸಂತ್ರಸ್ತ ವಿದ್ಯಾರ್ಥಿಯ ತಂದೆ ಸೋಮವಾರ ಪೊಲೀಸರಿಗೆ ಮನವಿ ಮಾಡಿದರು – ಸರ್, ಕಳೆದ ಎರಡು ವರ್ಷಗಳಿಂದ ಅವನು ನನ್ನ ಮಗನಿಗೆ ಹೀಗೆ ಮಾಡುತ್ತಿದ್ದಾನೆ ಎಂದು ನನಗೆ ಅನುಮಾನವಿದೆ. ದಯವಿಟ್ಟು ಅವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!