ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿನಿಮಾ ಘೋಷಿಸಿದ ; ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್.

ಬಿಗ್ ಬಾಸ್ ಕನ್ನಡ ವಿನ್ನರ್ ಕಾರ್ತಿಕ್ ಮಹೇಶ್ ಅವರು ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರ ‘ರಿಚಿ ರಿಚ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸುನಿ ಅವರೇ ಕಥೆ ಬರೆದಿರುವ ಈ ಚಿತ್ರದಲ್ಲಿ ಕಾರ್ತಿಕ್ ಶ್ರೀಮಂತನಾಗುವ ಕನಸು ಕಾಣುವ ರಿದ್ದೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್ ಅವರು ಒಂದಾದ ಬಳಿಕ ಒಂದರಂತೆ ಸಿನಿಮಾ ಘೋಷಿಸುತ್ತಿದ್ದಾರೆ. ಈ ಮೊದಲು ಅವರು ‘ರಾಮರಸ’ ಹೆಸರಿನ ಚಿತ್ರ ಘೋಷಿಸಿದ್ದರು. ಈಗ ಕನ್ನಡದ ಖ್ಯಾತ ನಿರ್ದೇಶಕನ ಜೊತೆ ಕಾರ್ತಿಕ್ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಚಿತ್ರಕ್ಕೆ ‘ರಿಚಿ ರಿಚ್’ ಎನ್ನುವ ಟೈಟಲ್ ಇಡಲಾಗಿದೆ. ಈ ವಿಚಾರ ಫ್ಯಾನ್ಸ್ಗೆ ಖುಷಿ ನೀಡಿದೆ.
ಕನ್ನಡದಲ್ಲಿ ಹಲವು ಸದಭಿರುಚಿ ಸಿನಿಮಾಗಳನ್ನು ನೀಡಿದವರು ಸಿಂಪಲ್ ಸುನಿ. ಅವರ ನಿರ್ದೇಶನದ ಹಲವು ಚಿತ್ರಗಳು ಹಿಟ್ ಆಗಿವೆ. ಇಡೀ ಕುಟುಂಬ ಕುಳಿತು ನೋಡುವ ಚಿತ್ರಗಳನ್ನು ನಿರ್ದೇಶನ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರ ಜೊತೆ ಕಾರ್ತಿಕ್ ಮಹೇಶ್ ಕೈ ಜೋಡಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ‘ರಿಚಿ ರಿಚ್’ ಚಿತ್ರಕ್ಕೆ ಸುನಿ ಅವರೇ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಅರವಿಂದ್ ವೆಂಕಟ್ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ. ‘ಎವಿಆರ್ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆ ಆರಂಭಿಸಿರೋ ಅವರಿಗೆ ಇದು ನಿರ್ಮಾಣದಲ್ಲಿ ಮೊದಲ ಅನುಭವ.

‘ರಿಚಿ ರಿಚ್’ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ. ಟೈಟಲ್ ಜೊತೆ ಕಾರ್ತಿಕ್ ಲುಕ್ ಕೂಡ ರಿವೀಲ್ ಆಗಿದೆ. ಅವರು ಚೆಸ್ ಆಡುತ್ತಿರುವ ರೀತಿಯಲ್ಲಿ ಪೋಸ್ಟರ್ ಇದೆ. ಸುನಿ ನಿರ್ಮಾಣದ ‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ರಿಚಿ’ ಹೆಸರಿನ ಪಾತ್ರ ಇತ್ತು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾದ ಟೈಟಲ್ ಆರಂಭ ಆಗಿದೆ.
ನವೆಂಬರ್​​ನಲ್ಲಿ ಸಿಎಂ ಬದಲಾವಣೆ ಆಗೋದು ಪಕ್ಕಾ?
ರಿದ್ದೇಶ್ ಚಿನ್ನಯ್ಯ ಅನ್ನೋದು ಕಥಾ ನಾಯಕನ ಹೆಸರು. ಇದನ್ನು ಶಾರ್ಟ್ ಆಗಿ ಆತ ರಿಚಿ ಎಂದು ಮಾಡಿಕೊಂಡಿದ್ದಾನೆ. ಇವನು ಶ್ರೀಮಂತ ಆಗುವುದು ಹೇಗೆಂದು ಕನಸು ಕಾಣುತ್ತಿದ್ದಾನೆ. ಆ ರೀತಿಯಲ್ಲಿ ಸಿನಿಮಾದ
ಈ ಚಿತ್ರದ ಬಗ್ಗೆ ಸದ್ಯಕ್ಕೆ ಇರೋ ಮಾಹಿತಿ ಇಷ್ಟೇ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಗಳನ್ನು ತಂಡ ತೆರೆದಿಡಲಿದೆ. ಕಾರ್ತಿಕ್ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!