ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಗೆ ತತ್ತರಿಸಿದ ಕೆ.ಕೆ.ಆರ್ ….

ಲೋಯೆಸ್ಟ್ ಸ್ಕೋರ್ ಅನ್ನು ಡಿಪೆಂಡ್ ಮಾಡುವ ಮುಖಾಂತರ ಐಪಿಎಲ್ ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಣರೋಚಕ ಪಂದ್ಯ ಒಂದಕ್ಕೆ ಸಾಕ್ಷಿಯಾಗಿದೆ. ಇಂತಹದೊಂದು ಮ್ಯಾಚ್ ನಡೆದಿರುವುದು ಕ್ರೀಡಾಭಿಮಾನಿಗಳಿಗೆ ಆಶ್ಚರ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಪ್ರಾರಂಭದಲ್ಲಿ ಉತ್ತಮ ಪ್ರದರ್ಶನ ಕಂಡರಾದರು ಕೆಕೆಆರ್ ನ ಬೌಲಿಂಗ್ ಡಿಪಾರ್ಟ್ಮೆಂಟ್ ವಿಕೆಟ್ ಪಾತನಗೊಳಿಸುವಲ್ಲಿ ಯಶಸ್ವಿಯಾಯಿತು. ಪಂಜಾಬ್ ಕಿಂಗ್ಸ್ ನ ನಾಯಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆಗೆ ಹೌಟ್ ಆಗಿ ಹೋದರು. ನಂತರ ಬಂದ ಬ್ಯಾಟ್ಸ್ಮನ್ ಗಳಿಂದಲೂ ಏನು ಮಾಡಲು ಸಾಧ್ಯವಾಗಲಿಲ್ಲ. ಇನ್ನು ಕ್ರಿಕೆಟ್ ಇತಿಹಾಸದಲ್ಲಿ ಬಿಗ್ ಶೋ ಎಂದು ಹೆಸರು ಪಡೆದಿರುವ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಅಧಿಕ ರನ್ ಗಳಿಸಲು ಸಾಧ್ಯವಾಗಲಿಲ್ಲ.

ಒಟ್ಟಾರೆಯಾಗಿ ತಂಡವು 15.3 ಓವರ್ ಗಳಲ್ಲಿ ಕೇವಲ 111 ರನ್ ಗಳಿಸಿ ಆಲ್ ಔಟ್ ಆದರು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ವೇಗವಾಗಿ ಪಂದ್ಯವನ್ನ ಮುಗಿಸಿ ರನ್ ರೇಟ್ ಉತ್ತಮಗೊಳಿಸುವಲ್ಲಿ ಮುಂದಾಗಲು ಯತ್ನಿಸಿದರು. ಡಿಪೆಂಡಿಂಗ್ ಚಾಂಪಿಯನ್ಸ್ ಗೆ ಇದು ಸುಲಭದ ತುತ್ತು ಎನಿಸಿತ್ತಾರಾದರೂ, ಕ್ರೀಡಾಂಗಣದಲ್ಲಿ ನಡೆದ ಇತಿಹಾಸವೇ ಬೇರೆಯಾಗಿತ್ತು.

ಪ್ರಾರಂಭದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಅನ್ನು ಮಾರ್ಕೊ ಜಾನ್ಸಸ್ ಉರುಳಿಸಿ ಒಂದೇ ಒಂದು ಜೀವಂತವಾಗಿರಿಸಿಕೊಂಡಿದ್ದರು. ನಂತರದಲ್ಲಿ ಬಂದ ಕೆಕೆಆರ್ ತಂಡದ ನಾಯಕ ಅಜೀಂಕೆ ರಹಾನೆ ಹಾಗೂ ರಘುವಂಶಿ 50 ರನ್ ಗಳ ಪಾರ್ಟ್ನರ್ಶಿಪ್ ಕಲೆ ಹಾಕಿದರಾದರು. ನಂತರದಲ್ಲಿ ಬೌಲಿಂಗ್ ಗೆ ಬಂದಂತಹ ಸ್ಪಿನ್ನರ್ ಯುಜುವೇಂದ್ರ ಚಹಲ್ ಆಟದ ದಿಕ್ಕನ್ನೇ ಬದಲಿಸಿದರು ಅದು ಸಹ ನಾಲ್ಕು ವಿಕೆಟ್ಗಳನ್ನು ಪಡೆಯುವುದರ ಮುಖಾಂತರ ಎಂಬುದ ವಿಶೇಷವಾಗಿದೆ.

ಇದರೊಂದಿಗೆ ರಣ ಉತ್ಸಾಹಕ್ಕೆ ಮಾರ್ಪಟ್ಟ ಪಂಜಾಬ್ ಕಿಂಗ್ಸ್ ಆಟಗಾರರು ಕೆಕೆಆರ್ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಅದ್ಭುತ ಫೀಲ್ಡಿಂಗ್ ಸೆಟ್ ಮಾಡುವ ಮೂಲಕ ಸತತ ವಿಕೆಟ್ ಪಡೆದರು. ಪರಿಣಾಮ 15.1ಓವರ್ ಗಳಲ್ಲಿ ಕೆಕೆಆರ್ ತಂಡವು 95 ರನ್ ಗಳಿಸಲಷ್ಟೇ ಶಕ್ತರಾದರು.

ಈ ಮುಖಾಂತರ ಕೆಕೆಆರ್ ತಂಡವನ್ನು ಆಲ್ ಔಟ್ ಮಾಡಿ ಪಂದ್ಯವನ್ನು ತನ್ನದಾಗಿಸಿಕೊಂಡಿತು ಪಂಜಾಬ್ ಕಿಂಗ್ಸ್ ಪಡೆ. ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತಿ ಕಡಿಮೆ ಸ್ಕೋರ್ ಗಳಿಸಿ ಜಯ ಸಾಧಿಸಿದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!