ಪಾಕ್ ಸೂಪರ್ ಲೀಗ್ ತೊರೆದಿದ್ದ ಆಟಗಾರ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟ್..!

ಪಂಜಾಬ್ ಕಿಂಗ್ಸ್ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಮಿಚೆಲ್ ಓವನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಹೀಗೆ ಪಾಕಿಸ್ತಾನ ಸೂಪರ್ ಲೀಗ್ ನಿಂದ ಐಪಿಎಲ್ ಗೆ ಬಂದ ಮಿಚೆಲ್ ಓವನ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ ಖಾತೆ ತೆರೆಯದೆ ಔಟ್ ಆದರು. ಬಿಗ್ ಬ್ಯಾಷ್ ಲೀಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಓವನ್ ಐಪಿಎಲ್ ನಲ್ಲಿ ನಿರಾಶೆ ಉಂಟುಮಾಡಿದರು.

ಐಪಿಎಲ್ 2025 ರ 59 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯದ ಗೆಲುವು ಪಂಜಾಬ್ಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಪಂಜಾಬ್ ತನ್ನ ತಂಡದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿತ್ತು. ಅದರಂತೆ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿದ್ದ ವಿದೇಶಿ ಆಟಗಾರನನ್ನು ದ್ವಿತೀಯಾರ್ಧದ ಐಪಿಎಲ್ ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ಸೇರಿಸಿಕೊಂಡಿತು. ವಾಸ್ತವವಾಗಿ ಪಂಜಾಬ್ ಕಿಂಗ್ಸ್ನ ಡ್ಯಾಶಿಂಗ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ ಐಪಿಎಲ್ 2025 ರಿಂದ ಹೊರಗುಳಿದಿದ್ದರು. ಹೀಗಾಗಿ ಪಿಎಸ್ಎಲ್ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಯುವ ಆಲ್‌ರೌಂಡರ್ ಮಿಚೆಲ್ ಓವನ್ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಮಿಚೆಲ್ ಓವನ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಕೇವಲ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.

ಅದರಂತೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆದ ಮಿಚೆಲ್ ಓವನ್ ಕೇವಲ 2 ಎಸೆತಗಳನ್ನು ಎದುರಿಸಿ ತಮ್ಮ ವಿಕೆಟ್ ಕಳೆದುಕೊಂಡರು. ಮಿಚೆಲ್ ಓವನ್ಗೆ ಖಾತೆ ತೆರೆಯಲು ಆಗಲಿಲ್ಲ. ಪಂಜಾಬ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಮಿಚೆಲ್, ಕ್ವೆನಾ ಎಂಫಕಾ ಅವರ ಅದ್ಭುತ ಎಸೆತದಲ್ಲಿ ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿದರು. ಮಿಚೆಲ್ ಓವನ್ ಪಾಕಿಸ್ತಾನ ಸೂಪರ್ ಲೀಗ್ 2025 ರಲ್ಲಿ ಪೇಶಾವರ್ ಝಲ್ಮಿ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದು, ಕೇವಲ 102 ರನ್‌ಗಳನ್ನು ಮಾತ್ರ ಕಲೆಹಾಕಿದ್ದರು.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!