ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.

ಸೌಂದರ್ಯ ಎಂದಾಗ ಮೊದಲು ನೆನಪಾಗುವುದೇ ಈ ಮಹಿಳೆಯರು. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಕಡಿಮೆ. ತ್ವಚೆಯ ಆರೈಕೆಗೆ ಸಮಯ ಕೊಡುವುದಿಲ್ಲ ಎಂದು ಹೇಳುವುದನ್ನು ಕೇಳಿರಬಹುದು. ಮಹಿಳೆಯರಿಗೆ ಹೋಲಿಕೆ ಮಾಡಿದರೆ ಪುರುಷರಿಗೆ ಸೌಂದರ್ಯದ ಬಗ್ಗೆ ಆಸಕ್ತಿ ಕಡಿಮೆಯೇ ಎನ್ನಬಹುದು. ಒಂದು ವೇಳೆ ನೀವು ಸುಂದರವಾಗಿ ಕಾಣಿಸಬೇಕೆಂದರೆ ಈ ಕೆಲವು ಸಲಹೆಗಳನ್ನು ತಪ್ಪದೇ ಪಾಲಿಸಿ.

ಸಾಂದರ್ಭಿಕ ಚಿತ್ರಗಳು
• ಪುರುಷರು ಕೂಡ ತ್ವಚೆಯ ಆರೈಕೆ ಮಾಡುವುದು ಬಹಳ ಮುಖ್ಯ. ಹೀಗಾಗಿ ಒಣಮುಖವನ್ನು ಹೊಳೆಯುವಂತೆ ಮಾಡುವ ಮತ್ತು ಮುಖದಲ್ಲಿರುವ ಹೆಚ್ಚುವರಿ ಎಣ್ಣೆ ಅಂಶ ಹೊಂದಿದ್ದರೆ, ಕ್ರೀಮ್‎ ಬಳಸುವುದು ಸೂಕ್ತ. ಅದಲ್ಲದೇ, ಕಲೆಯನ್ನು ನಿವಾರಿಸುವ ಕ್ರೀಮ್ ಗಳು ಲಭ್ಯವಿದ್ದು, ಅದರಲ್ಲಿ ಈ ಕನ್ಸಿಲರ್‎ಗಳು ಕಪ್ಪು ಕಲೆಗಳನ್ನು ನಿವಾರಿಸಿ ತ್ವಚೆಯ ಅಂದವನ್ನು ಹೆಚ್ಚಿಸುತ್ತದೆ.
• ಸನ್ ಸ್ಕ್ರೀನ್ ಲೋಷನ್ ಬಳಸುವುದು ಬಹಳ ಮುಖ್ಯ. ಬಿಸಿಲಿನಲ್ಲಿ ಹೊರಗೆ ಹೋಗುತ್ತಿದ್ದರೆ ಸನ್ ಸ್ಕ್ರೀನ್ ಬಳಸುವುದು ಸೂರ್ಯನ ಹಾನಿಕಾರಕ ಕಿರಣಗಳಿಂದ ತ್ವಚೆಯನ್ನು ರಕ್ಷಿಸುತ್ತದೆ. ಸೂರ್ಯನ ಕಿರಣ ಮಹಿಳೆಯರಿಗಿಂತ ಪುರುಷರ ಚರ್ಮವನ್ನೂ ಹೆಚ್ಚು ಹಾನಿಗೊಳಿಸುತ್ತದೆ. ಹೀಗಾಗಿ ಸನ್ ಸ್ಕ್ರೀನ್ ಬಳಸುವುದು ಅತ್ಯಗತ್ಯ.
• ಹೆಣ್ಣು ಮಕ್ಕಳಂತೆ ಪುರುಷರನ್ನು ಈ ಮೊಡವೆ ಸಮಸ್ಯೆಗಳು ಕಾಡುತ್ತದೆ. ಮುಖದ ತುಂಬಾ ಮೊಡವೆಯಿದ್ದರೆ ಶೇವ್ ಮಾಡುವುದು ಕಷ್ಟವಾಗಬಹುದು. ಆದರೆ ಮೊಡವೆ ಸಮಸ್ಯೆಗೆ ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್ ಬಳಸುವುದಕ್ಕಿಂತ ಮನೆಯಲ್ಲೇ ಸಿಗುವ ವಸ್ತು ಬಳಸುವುದು ಉತ್ತಮ. ಹೀಗಾಗಿ ಅಡುಗೆ ಮನೆಯಲ್ಲಿ ಇರುವ ವಸ್ತುಗಳನ್ನೇ ಬಳಸಿ ಮೊಡವೆ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.
ಸಾಂದರ್ಭಿಕ ಚಿತ್ರಗಳು
• ಗಡ್ಡ ಮೀಸೆಯ ಕಡೆಗೆ ಗಮನ ಕೊಡುವ ಮೂಲಕ ನೀವು ಸುಂದರವಾಗಿ ಕಾಣಿಸಿಕೊಳ್ಳಬಹುದು. ಹೀಗಾಗಿ ಪ್ರೆಂಚ್ ಕಟ್, ಟ್ರಿಮ್ ಗಡ್ಡ ಹೀಗೆ ನಿಮಗಿಷ್ಟವಾದ ರೀತಿಯಲ್ಲಿ ಗಡ್ಡ ಹಾಗೂ ಕೂದಲನ್ನು ಸೆಟ್ ಮಾಡಿಸಿಕೊಳ್ಳಿ. ಕೆಲವರಿಗೆ ಗಡ್ಡ ಹಾಗೂ ಮೀಸೆ ಬೇಗನೇ ಬರುತ್ತದೆ. ಅಂತಹವರು ಗಡ್ಡ ಮತ್ತು ಮೀಸೆಯನ್ನು ಟ್ರಿಮ್ ಮಾಡುವತ್ತ ಗಮನ ಕೊಡಿ. ಇದು ನಿಮ್ಮ ಮುಖವನ್ನು ನೀಟ್ ಆಗಿ ಕಾಣುವಂತೆ ಮಾಡುತ್ತದೆ.
• ನೀವು ಧರಿಸುವ ಬಟ್ಟೆಗಳು ನಿಮ್ಮನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ. ಹೀಗಾಗಿ ಸಂದರ್ಭಕ್ಕೆ ತಕ್ಕಂತೆ ಉಡುಗೆ ಧರಿಸುವುದು ಉತ್ತಮ. ಬಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಣ್ಣಗಳು, ಟ್ರೆಂಡ್ ನಲ್ಲಿರುವ ಉಡುಗೆಗಳತ್ತ ಗಮನ ಕೊಡಿ. ಬಟ್ಟೆಗಳ ಆಯ್ಕೆಯು ನಿಮ್ಮನ್ನು ಸ್ಟೈಲಿಶ್ ಆಗಿ ಕಾಣುವಂತೆ ಮಾಡುತ್ತದೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!