
ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ. ಈಗ ಬದಲಾದ ಪರಿಸ್ಥಿತಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಮೊದಲು ಅವರು ಸೆಷನ್ಸ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ನಂತರವಷ್ಟೇ ಹೈಕೋರ್ಟ್ ಮೊರೆ ಹೋಗಬಹುದೇ ಹೊರತು ಪ್ರಕ್ರಿಯೆ ಉಲ್ಲಂಘಿಸಿ ನೇರವಾಗಿ ಹೈಕೋರ್ಟ್ನ ನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ,” ಎಂದರು. ಅರ್ಜಿದಾರರ ಪರ ವಕೀಲರು “ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆಯೇ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಪ್ರಕರಣದಲ್ಲಿ 150 ಸಾಕ್ಷಿಗಳ ವಿಚಾರಣೆಯಾಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲದಿರುವುದರಿಂದ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಪೊಲೀಸ್ ವಶಕ್ಕೂ ತೆಗೆದುಕೊಂಡಿಲ್ಲ. ಹಾಗಾಗಿ, ಷರತ್ತು ವಿಧಿಸಿ ಜಾಮೀನು ನೀಡಬೇಕು,” ಎಂದು ಮನವಿ ಮಾಡಿದರು.





