ಫಿಟ್ ಅಂಡ್ ಫೈನ್ ಆಗಿದ್ದ ತಮಿಳು ನಟ ವಿಶಾಲ್ಗೆ ನಿಜಕ್ಕೂ ಆಗಿದ್ದೇನು ಗೊತ್ತಾ?

ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮಿಳು ನಟ ವಿಶಾಲ್ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಮಾಸ್ ಆಗಿ ಗಮನ ಸೆಳೆಯುತ್ತಾರೆ. ಯಾವುದೇ ವಿಚಾರ ಇದ್ದರೂ ನೇರ ಮಾತುಗಳಲ್ಲಿ ಹೇಳುತ್ತಾರೆ. ಯಾರೇ ಪ್ರಶ್ನೆ ಮಾಡಿದರೂ ಅವರಿಗೆ ಉತ್ತರ ನೀಡುತ್ತಾರೆ. ಇಂಥ ವಿಶಾಲ್ ಅವರು ಈಗ ಸಖತ್ ಡಲ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಮದ ಗಜ ರಾಜ’ ಸಿನಿಮಾದ ಪ್ರೀ ರಿಲೀಸ್ ಈವೆಂಟ್ಗೆ ಆಗಮಿಸಿದ್ದರು. ಆಗ ಅವರ ಕೈ ನಡುಗಿದೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.


ಚೆನ್ನೈನಲ್ಲಿ ಇತ್ತೀಚೆಗೆ ‘ಮದ ಗಜ ರಾಜ’ ತಂಡದವರು ಅದ್ದೂರಿಯಾಗಿ ಪ್ರೀ-ರಿಲೀಸ್ ಈವೆಂಟ್ ಮಾಡಿದರು. ಈ ಚಿತ್ರಕ್ಕೆ ವಿಶಾಲ್ ಹೀರೋ. ಹೀಗಾಗಿ, ಅವರು ಕೂಡ ವೇದಿಕೆ ಏರಿದ್ದರು. ಅವರು ಮಾತನಾಡುವಾಗ ಕೈ ನಡುಗುತ್ತಿತ್ತು. ಮಾತುಗಳನ್ನಾಡಲು ಕಷ್ಟಪಟ್ಟರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಶಾಲ್ಗೆ ಏನಾಯಿತು ಎಂದು ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ವಿಶಾಲ್ ಅವರು ಮಾತನಾಡುವಾಗ ಮೈಕ್ನ ಗಟ್ಟಿ ಹಿಡಿದು ಮಾತನಾಡುತ್ತಿದ್ದರು. ಅವರ ಮಾತುಗಳು ನೇರವಾಗಿ ಇರುತ್ತಿದ್ದವು. ಆದರೆ, ಮೊದಲಿದ್ದ ವಿಶಾಲ್ ಈಗ ಕಾಣೆ ಆಗಿದ್ದಾರೆ. ಈಗ ಕೇಳಿ ಬರುತ್ತಿರುವ ಸ್ಪಷ್ಟನೆ ಏನೆಂದರೆ ಅವರಿಗೆ ಆ ಸಂದರ್ಭದಲ್ಲಿ ತೀವ್ರ ಜ್ವರ ಇತ್ತು. ಆದಗ್ಯೂ ಅವರು ವೇದಿಕೆ ಏರಿ ಮಾತನಾಡಿದ್ದರು. ಜ್ವರ ಇದ್ದ ಕಾರಣದಿಂದಲೇ ಅವರಿಗೆ ನಡುಕ ಶುರುವಾಗಿತ್ತು ಎನ್ನಲಾಗಿದೆ.
ಸದ್ಯ ವಿಶಾಲ್ ಬಗ್ಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜ್ವರದ ಮಧ್ಯೆಯೂ ಅವರು ಕಮಿಟ್ಮೆಂಟ್ ಮರೆಯಲಿಲ್ಲ ಎಂದು ಅನೇಕರು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ‘ವಿಶಾಲ್ ಡೆಡಿಕೇಷನ್. ಅವರು ಜ್ವರದ ಮಧ್ಯೆಯೂ ಸಿನಿಮಾ ಪ್ರಮೋಟ್ ಮಾಡಿದ್ದಾರೆ’ ಎಂದಿದ್ದಾರೆ ಅಭಿಮಾನಿಗಳು.
‘ಮದ ಗಜ ರಾಜ’ ಸಿನಿಮಾದಲ್ಲಿ ಅಂಜಲಿ, ಸೋನು ಸೂದ್, ವರಲಕ್ಷ್ಮೀ ಶರತ್ಕುಮಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾನ ಸುಂದರ್ ಸಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ 2013ರಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, 12 ವರ್ಷಗಳ ಬಳಿಕ ಸಿನಿಮಾ ರಿಲೀಸ್ ಆಗುತ್ತಿದೆ. ಜನವರಿ 12ರಂದು ಸಿನಿಮಾ ಬಿಡುಗಡೆ ಆಗುತ್ತಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು