ಬಂದ್ ! ಬಂದ್ ! ಬಂದ್ ! ಮಾ.22 ರಂದು ಕರ್ನಾಟಕ ಬಂದ್

ವಿವಿಧೆಡೆ ಮುತ್ತಿಗೆ, ಗಡಿಗಳ ಬಂದ್ಗೆ ಮಾ.3ರಿಂದಲೇ ನಿರ್ಧಾರ..!
ಬೆಂಗಳೂರು – ಬೆಳಗಾವಿಯಲ್ಲಿ ಕನ್ನಡದ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ, ಕನ್ನಡಿಗರ ಮೇಲೆ ಎಂಇಎಸ್ ಪುಂಡಾಟ, ಶಿವಸೇನೆ ನಾಯಕರು ಹಾಗೂ ಕಾರ್ಯಕರ್ತರು ಕರ್ನಾಟಕಕ್ಕೆ ಕಾಲಿಡದಂತೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮಾ. 22ರಂದು ಕರ್ನಾಟಕ ಬಂದ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಮಾ.3 ರಿಂದಲೇ ರಾಜಭವನ ಮುತ್ತಿಗೆ, ಮಾ.7 ಬೆಳಗಾವಿ ಚಲೋ ಸೇರಿ ಹಂತ ಹಂತ ವಾಗಿ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಶುಕ್ರ ವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಶಿವಸೇನೆಗಡಿಪಾರು ಮಾಡ ಬೇಕು. ಸಂಭಾಜಿ ಪ್ರತಿಮೆ ತೆರವುಗೊಳಿ ಸಬೇಕು. ಕಂಡಕ್ಟರ್ ಮೇಲಿನ ಹಲ್ಲೆಗೆ ಉನ್ನತ ಮಟ್ಟದ ತನಿಖೆ ಯಾಗಬೇಕು. ವಾಟಾಳ್ ಕೊಪ್ಪಳ ಕಾರ್ಖಾನೆಗಳಿಂದ ಪರಿಸರ ಹಾಳಾಗುತ್ತಿದ್ದು, ಇದಕ್ಕೆ ತಡೆ ನೀಡಬೇಕು. ಪರ ಭಾಷೆಯವರು ತಮ್ಮದೇ ಭಾಷಾ ವ್ಯಾಮೋಹ ಹೊಂದಿದ್ದರೆ ನಮ್ಮ ರಾಜ್ಯ ದಿಂದ ಹೊರಗಡೆ
ಹೋಗಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೂಲೆಗುಂಪಾಗಿದ್ದು, ಇದಕ್ಕೆ ಶಕ್ತಿ ತುಂಬಬೇಕು ಎಂದು ಆಗ್ರಹಿಸಿ ಮಾ.22ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಕನ್ನಡ ಒಕ್ಕೂಟದಿಂದ ಹಂತ ಹಂತವಾಗಿ ಪ್ರತಿಭಟನೆ
ಮಾರ್ಚ್ 3 – ಬೆಳಿಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ.
ಮಾರ್ಚ್ 7 – ರಂದು ಬೆಳಗಾವಿ ಚಲೋ.
ಮಾರ್ಚ್ 11 – ಅತ್ತಿಬೆಲೆ ತಮಿಳುನಾಡು ಗಡಿ ಬಂದ್.
ಮಾರ್ಚ್ 14 – ಮಂಡ್ಯ ಮೈಸೂರು, ರಾಮನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮಾರ್ಚ್ 16 – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬಂದ್.
ಮಾರ್ಚ್ 22 – ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅಖಂಡ ಕರ್ನಾಟಕ ಬಂದ್
ಪೂಜಾ ಗಾಂಧಿ ಹಾಡಿಗೆ ಫ್ಯಾನ್ಸ್ ಫುಲ್ ಫಿದಾ..!
ಕರ್ನಾಟಕ ಬಂದ್ಗೆ ಕರೆ ನೀಡಿರುವುದಕ್ಕೆ ಯಾರೊಬ್ಬರೂ ನನ್ನನ್ನು ಕರೆದಿಲ್ಲ ಅಂತ ಮಾತನಾಡಬೇಡಿ. ನಾನು ಪ್ರವೀಣ್ ಶೆಟ್ಟಿ ಅವರನ್ನು ಕರೆದಿದ್ದೆ. ಆದರೆ ಪಾಪ ಅವರು ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ನಾನು ನಾರಾಯಣಗೌಡರಿಗೂ ಬಹಿರಂಗವಾಗಿ ಕರೆಯುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಾವು ಕಳಕಳಿಯಿಂದ ಮನವಿ ಮಾಡುತ್ತೇನೆ. ಇದು ರಾಜಕೀಯವಲ್ಲ ಸಂಪೂರ್ಣ ಬೆಂಬಲ ನೀಡಬೇಕು. ರಾಮಲಿಂಗಾರೆಡ್ಡಿ ಅವರು ನಿಮ್ಮ ಇಲಾಖೆಯ ಎಲ್ಲ ಬಸ್ಸುಗಳನ್ನು ನಿಲ್ಲಿಸಿ ಬೆಂಬಲ ಸೂಚಿಸಬೇಕು. ಹೋಟೆಲ್ ಅವರು ಬಂದ್ ಮಾಡಿ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇರುವ ಶಾಪಿಂಗ್ ಮಾಲ್ಗಳೆಲ್ಲ ಮುಚ್ಚುತ್ತಾರೆ ನಾವು ಮಾತನಾಡಿದ್ದೇವೆ. ಸರ್ಕಾರಿ ನೌಕರರರ ಸಂಘ ಗೌರವದಿಂದ ಹೇಳುತ್ತೇನೆ ಬೆಂಬಲ ನೀಡಿ. ಖಾಸಗಿ ಶಾಲೆ, ಸರ್ಕಾರಿ ಶಾಲೆ ರಜೆ ಘೋಷಣೆ ಮಾಡಿ. ಎಲ್ಲಾ ಐಟಿ ಕಂಪನಿಗಳು ಕೂಡ ರಜೆ ಕೊಡಬೇಕು. ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ, ವ್ಯವಹಾರ ನಿಲ್ಲಿಸಬೇಕು. ಉಳಿದಂತೆ ಎಲ್ಲ ಜನಸಾಮಾನ್ಯರು ಇದಕ್ಕೆ ಬೆಂಬಲ ನೀಡಲಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!