ಬರೋಬ್ಬರಿ 8 ತಿಂಗಳು ಫ್ರಿಡ್ಜ್ನಲ್ಲೇ ಇತ್ತು ಮೃ*ದೇಹ!

ಭೋಪಾಲ್ :- ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಉಜ್ಜಯಿನಿ ನಿವಾಸಿಯಾಗಿರುವ ಆರೋಪಿ ಸಂಜಯ್ ಪಾಟಿದಾರ್ ಕಳೆದ ಐದು ವರ್ಷಗಳಿಂದ ಪ್ರತಿಭಾ ಯಾನೆ ಪಿಂಕಿ ಪ್ರಜಾಪತಿ ಜೊತೆ ಲಿವ್ಇನ್ ಸಂಬಂಧದಲ್ಲಿದ್ದ. ಆದರೆ ಆಕೆ ತನ್ನನ್ನು ಮದುವೆಯಾಗು ಎಂದು ಒತ್ತಾಯಿಸಲು ಶುರುಮಾಡಿದ್ದಾಳೆ. ಅದಾಗಲೇ ಮದುವೆಯಾಗಿದ್ದ ಸಂಜಯ್ ಪಾಟಿದಾರ್, ಮದುವೆಗೆ ನಿರಾಕರಿಸಿದ್ದ. ಪ್ರತಿಭಾ ಮತ್ತಷ್ಟು ಪೀಡಿಸುತ್ತಿದ್ದಂತೆ ತನ್ನ ಸ್ನೇಹಿತ ವಿನೋದ್ ದವೆಯನ್ನು ಕರೆಸಿಕೊಂಡಿದ್ದ ಸಂಜಯ್, ಪ್ರತಿಭಾಳನ್ನು ಕೊಲೆ ಮಾಡಿ ಮೃತದೇಹವನ್ನ ಫ್ರಿಡ್ಜ್ನಲ್ಲಿಟ್ಟು ಮನೆ ಖಾಲಿ ಮಾಡಿದ್ದ.
ಸಂಜಯ್ ಬಾಡಿಗೆ ಪಡೆದಿದ್ದ ಮನೆಯ ಫ್ರಿಡ್ಜ್ನಲ್ಲಿ ಮೃತದೇಹವನ್ನಿಟ್ಟಿದ್ದ. ಶ್ರೀವಾಸ್ತವ ಎಂಬವರಿಂದ ಮನೆಯನ್ನು ಬಾಡಿಗೆ ಪಡೆದಿದ್ದ ಸಂಜಯ್, ವರ್ಷದ ಹಿಂದೆಯೇ ಮನೆ ಬಿಟ್ಟಿದ್ದ. ಆದಾಗ್ಯೂ ಆಗಾಗ ಬಂದು ಹೋಗುವುದನ್ನು ಮಾಡುತ್ತಿದ್ದ. ಅಲ್ಲದೆ, ಕೆಲವು ವಸ್ತುಗಳನ್ನು ಅಧ್ಯಯನ ಕೊಠಡಿ ಮತ್ತು ಮಾಸ್ಟರ್ ಬೆಡ್ರೂಮ್ನಲ್ಲಿ ಇರಿಸುವುದನ್ನು ಮುಂದುವರೆಸಿದ್ದ. ಹೀಗಾಗಿ ಮನೆ ಮಾಲೀಕರಿಗೂ ಹೆಚ್ಚಿನ ವಿಚಾರ ಗೊತ್ತಿರಲಿಲ್ಲ.
ಇತ್ತೀಚೆಗೆ, ನೆರೆ ಮನೆಯವರು ಅನುಮಾನ ಬಂದು ಮನೆಯ ಬಾಗಿಲು ತೆರೆಯುವಂತೆ ಮಾಲೀಕರನ್ನು ಕೇಳಿದ್ದರು. ಹಾಗೆ ಬಾಗಿಲು ತೆರೆದಾಗ ಪಾಟಿದಾರ್ಗೆ ಸಂಬಂಧಿಸಿದ ವಸ್ತುಗಳು ಒಳಗಿದ್ದ ಕಾರಣ ಮತ್ತೆ ಲಾಕ್ ಮಾಡಿದ್ದರು. ಆದರೆ, ಬುಧವಾರದಿಂಧ ವಿದ್ಯುತ್ ಸರಬರಾಜನ್ನು ಆಫ್ ಮಾಡಿದ್ದರು. ಇದರಿಂದಾಗಿ ಫ್ರಿಡ್ಜ್ನಲ್ಲಿದ್ದ ಮೃತದೇಹದ ವಾಸನೆ ಅಕ್ಕಪಕ್ಕದ ಮನೆಯವರಿಗೆ ಬಂದಿತ್ತು ಎಂದು ಪೊಲೀಸ್ ಅಧಿಕಾರಿ ಅಮಿತ್ ಸೋಲಂಕಿ ಎಂಬವರು ತಿಳಿಸಿದ್ದಾರೆ.
ಸೀರೆಯುಟ್ಟುಕೊಂಡು, ಆಭರಣ ತೊಟ್ಟು, ಅಲಂಕರಿಸಿಕೊಂಡು, ಕುತ್ತಿಗೆಯನ್ನು ತನ್ನ ಕೈಗಳಿಂದ ತಾನೇ ಬಲವಾಗಿ ಬಿಗಿಯಾಗಿ ಕಟ್ಟಿಕೊಂಡು ಕುಳಿತಿರುವ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ಫ್ರಿಡ್ಜ್ ತೆರೆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಭಯಾನಕ ಸತ್ಯ ಬಯಲಾಗಿದೆ.
ಯುವತಿಯನ್ನು 2024ರ ಜೂನ್ನಲ್ಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂಜಯ್ ಪಡೆದಿದ್ದ ಬಾಡಿಗೆ ಮನೆಯಿಂದ ದುರ್ವಾಸನೆ ಬರಲು ಆರಂಭಿಸಿದ್ದರಿಂದ ನೆರೆಮನೆಯವರು ಮನೆಯ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮನೆ ಮಾಲೀಕ ಬಂದು ನೋಡಿದಾಗ ಮಹಿಳೆಯ ಮೃತದೇಹ ಫ್ರಿಡ್ಜ್ನಲ್ಲಿರುವುದು ಗೊತ್ತಾಗಿದೆ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಮಾಹಿತಿ ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!