ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗ್ತಾ ಇದೆ.

‘ಬೆಂಗಳೂರು ಎಂಬುದು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು