ಬೆಂಗಳೂರಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ತುಂಬಾ ಕಷ್ಟವಂತೆ….

ಪ್ರವಾಸಕ್ಕೆಂದು ಬೆಂಗಳೂರಿಗೆ ಹೋದವರಿಗಿಂತ, ಕೆಲಸವನ್ನು ಅರಸಿ ಮನೆಯ ಕಷ್ಟವನ್ನು ನೀಗಲು ಹೊರಟವರೇ ಹೆಚ್ಚು. ಆದರೆ ಬೆಂಗಳೂರಿನಲ್ಲಿ ನಿವಾಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎನ್ನುತ್ತಿದ್ದಾರೆ ಬೆಂಗಳೂರಿನಲ್ಲಿರುವ ನಿವಾಸಿಗಳು. ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಅಲ್ಲಿನ ವಾತಾವರಣ ಹೊಸತು, ಜನರು ಹೊಸಬರು. ಹೀಗಾಗಿ ಪ್ರಾರಂಭದ ದಿನಗಳಲ್ಲಿ ಹೊಸ ಜಾಗ ಹಾಗೂ ಜನರ ಜೊತೆಗೆ ಬೆರೆಯಲು ಕಷ್ಟ ಪಡುತ್ತಾರೆ. ಇದೀಗ ರೆಡ್ಡಿಟ್ ಬಳಕೆದಾರರೊಬ್ಬರು ತನ್ನ ಸ್ನೇಹಿತೆಯೂ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು ಸ್ನೇಹಿತರಿಲ್ಲದೆ ಹೇಗೆ ಒಂಟಿತನವನ್ನು ಅನುಭವಿಸುತ್ತಿದ್ದಾಳೆ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಾಸ್ತವತೆಯನ್ನು ಒಪ್ಪಿಕೊಂಡಿದ್ದು ಕಾಮೆಂಟ್ ಗಳನ್ನು ಮಾಡಿದ್ದಾರೆ.

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು ಎನ್ನುವ ಮಾತಿದೆ. ಹೀಗಾಗಿ ಅನಿವಾರ್ಯ ಕಾರಣಕ್ಕೆ ಬೆಂಗಳೂರಿನಂತಹ ಪಟ್ಟಣಕ್ಕೆ ಕೆಲಸ ಹುಡುಕಿಕೊಂಡು ಹೋಗುವವರೇ ಹೆಚ್ಚು. ಕೆಲವರಂತೂ ಈ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಒದ್ದಾಡುವುದಿದೆ. ಜಂಜಾಟದ ಬದುಕಿನಲ್ಲಿ ಸ್ನೇಹ, ಪ್ರೀತಿ ಹಾಗೂ ಭಾವನೆಗಳ ಬಗ್ಗೆ ಜನ ತಲೆಕೆಡಿಸಿಕೊಳ್ಳುವುದೇ ಕಡಿಮೆ. ಆದರೆ ಬಳಕೆದಾರರು, ಬೆಂಗಳೂರಿಗೆ ಸ್ಥಳಾಂತರ ಗೊಂಡಿರುವ ತನ್ನ ಸ್ನೇಹಿತೆಯೊಬ್ಬಳು, ಸ್ನೇಹಿತರನ್ನು ಮಾಡಿಕೊಳ್ಳಲು ಎಷ್ಟು ಕಷ್ಟ ಪಡುತ್ತಿದ್ದಾಳೆ. ವಯಸ್ಕರಾದಾಗ ಸ್ನೇಹಿತರನ್ನು ಮಾಡಿಕೊಳ್ಳುವುದು ಎಷ್ಟು ಕಷ್ಟವಿದೆ ಎನ್ನುವ ಬಗೆಗಿನ ಪೋಸ್ಟ್ ವೊಂದನ್ನು ಹಂಚಿ ಕೊಂಡಿದ್ದಾರೆ.

ಸದಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅದ್ಭುತ ಹಾಸ್ಯ ಪ್ರಜ್ಞೆಯನ್ನು ಹೊಂದಿರುವ ಜನರಲ್ಲಿ ಅವಳು ಕೂಡ ಒಬ್ಬಳು. ಆದರೆ ತನ್ನ ಭಾವನೆಗಳನ್ನು ಹೊರ ಹಾಕಿಕೊಳ್ಳದೇ ಒಂಟಿತನ ಅನುಭವಿಸುತ್ತ ಬೇಸೆತ್ತು ಹೋಗಿದ್ದಾಳೆ. ಅವಳು ಈ ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಒಂಟಿತನದಿಂದ ಮುಕ್ತವಾಗಲು ಮಹಿಳಾ ಸ್ನೇಹಿತರನ್ನು ಹೊಂದಲು ಹಾಗೂ ಸ್ನೇಹಿತರ ಗುಂಪಿನಲ್ಲಿ ತಾನು ಕೂಡ ಭಾಗಿಯಾಗಲು ಇಷ್ಟ ಪಡುತ್ತಾಳೆ. ಹಾಗಾಗಿ ನಾನು ನಿಮ್ಮ ಬಳಿ ಈ ಬಗ್ಗೆ ಕೇಳುತ್ತಿದ್ದು, ಬೆಂಗಳೂರಿನಲ್ಲಿ ನೀವು ಹೊಸ ಹೊಸ ಜನರನ್ನು ಮಹಿಳೆ ಯರು ಅಥವಾ ಪುರುಷರು ಹೇಗೆ ಭೇಟಿಯಾಗುತ್ತೀರಿ. ಸ್ನೇಹಿತರನ್ನು ಹೇಗೆ ಮಾಡಿಕೊಳ್ಳುತ್ತೀರಿ. ನಿಮ್ಮ ಬಳಿ ಯಾವುದೇ ಸಲಹೆಗಳಿದ್ದಲ್ಲಿ, ಸಮುದಾಯಗಳು, ಇವೆಂಟ್ ಗಳು, ಅಪ್ಲಿಕೇಶನ್ ಗಳು ಇದ್ದಲ್ಲಿ ಅದಲ್ಲೆವೂ ಸ್ವಾಗತಾರ್ಹವಾಗಿದೆ. ತನ್ನ ಸಮಯ ಹಾಗೂ ಭಾವನೆಗಳನ್ನು ಹಂಚಿಕೊಳ್ಳಲು ಯಾರು ಇಲ್ಲದೇ ಆಕೆ ಹೋರಾಡುವುದನ್ನು ನೋಡುವುದು ನಿಜಕ್ಕೂ ನನಗೆ ನೋವನ್ನುಂಟು ಮಾಡುತ್ತದೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!