ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!…..

ನಿನ್ನೆ ರಾತ್ರಿಯೇ ಏಕಾಏಕಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ ತಂದೆ ನೂರಹಸನ.ತಂದೆಯ ಆಸೆ ಈಡೇರಿಸಲು ದುಃಖದಲ್ಲೂ ನಿರ್ಧಾರ ಮಾಡಿದ ವಿದ್ಯಾರ್ಥಿನಿ.ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು.ತಂದೆ ಸಾವಿನ ದುಃಖದಲ್ಲೂ ಮಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.

ಶಬಾನಾ ಪಟಾಸು ನವಲಗುಂದ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಶಬಾನಾ ಚೆನ್ನಾಗಿ ಓದಬೇಕು ಅನ್ನೋದು ಶಬಾನಾ ತಂದೆ ನೂರಹಸನ ಅವರ ಆಸೆಯಾಗಿತ್ತು. ಆದರೆ ಕಳೆದ ಗುರುವಾರ ರಾತ್ರಿ ಏಕಾಏಕಿ ಹೊಟ್ಟೆ ನೋವು ಬಂದು ಮೃತಪಟ್ಟಿದ್ದಾರೆ.ಶುಕ್ರವಾರ ಬೆಳಗ್ಗೆ ಮಗಳಿಗೆ SSLC ಪರೀಕ್ಷೆ ಇತ್ತು. ಗುರುವಾರ ರಾತ್ರಿ ತಂದೆ ನೂರಹಸನ ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು. ಆದರೆ ಗುರುವಾರ ರಾತ್ರಿಯೇ ವಿದ್ಯಾರ್ಥಿನಿ ತಂದೆ ಪ್ರಾಣ ಬಿಟ್ಟಿದ್ದಾರೆ.ತಂದೆಯ ಸಾವಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಶಬಾನಾ ಪಟಾಸು SSLC ಪರೀಕ್ಷೆಗೆ ಗೈರಾಗುತ್ತಿದ್ದರು. ಇದನ್ನು ತಿಳಿದ ಶಿಕ್ಷಕರು ವಿದ್ಯಾರ್ಥಿನಿಯ ಮನ ಒಲಿಸಿದ್ದಾರೆ. ಶಿಕ್ಷಕರ ಮನವಿ, ತಂದೆಯ ಆಸೆ ಈಡೇರಿಸಲು ನಿರ್ಧರಿಸಿದ ಶಬಾನಾ ಪರೀಕ್ಷೆಗೆ ಹಾಜರಾಗಿದ್ದಾರೆ.
ಈ ವಿಷಯ ತಿಳಿದ ಶಿಕ್ಷಣ ಇಲಾಖೆ ವಿದ್ಯಾರ್ಥಿನಿಗೆ ವಾಹನ ವ್ಯವಸ್ಥೆಯ ಅನುಕೂಲ ಮಾಡಿಕೊಟ್ಟಿದೆ. ತಂದೆಯ ಪ್ರೇರಣೆಯಿಂದಲೇ ಶಾಲೆಗೆ ಬರುತ್ತಿರುವುದಾಗಿ ಹೇಳಿರುವ ವಿದ್ಯಾರ್ಥಿನಿ ದುಃಖದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗಮನ ಸೆಳೆದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!