ಬ್ಯಾಕ್ ಟು ಬ್ಯಾಕ್ ಐಪಿಎಲ್ ಕಪ್ ಅನ್ನು ತನ್ನ ಮುಡಿಗೇರಿಸಿಕೊಂಡ ಆರ್.ಸಿ.ಬಿ….

2008 ರಿಂದ 2024 ರವರೆಗೆ ಆರ್.ಸಿ.ಬಿಯ ಪುರುಷರ ತಂಡವು ಯಾವುದೇ ಐಪಿಎಲ್ ಕಪ್ ಅನ್ನು ಗೆದ್ದಿರಲಿಲ್ಲ, ಆದರೆ 2025 ಸೀಸನ್ 18ರಲ್ಲಿ ಆರ್ ಸಿ ಬಿ ಆ ಪುರುಷರ ತಂಡವು ಕಪ್ಪನ್ನು ಗೆದ್ದು ಇತಿಹಾಸವನ್ನು ಸೃಷ್ಟಿಸಿದೆ. ಹಾಗೂ ಆರ್‌ಸಿಬಿಯ ಮಹಿಳೆಯರ ತಂಡವು 2024ರಲ್ಲಿ ಕಪ್ಪನ್ನು ಗೆದ್ದು ತನ್ನ ಮುಡುಗೇರಿಸಿಕೊಂಡಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಕಪ್ಪುಗಳನ್ನು ಗೆದ್ದು ದಾಖಲೆಯನ್ನು ಬರೆದಿದೆ ಆರ್‌ಸಿಬಿ ತಂಡ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು 2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಪುರುಷರ ತಂಡದ ಟ್ರೋಫಿ ಬರ ಮುಂದುವರಿದಿತ್ತು. ಈ ಬಾರಿ ರಜತ್ ಪಾಟಿದರ್ ನೇತೃತ್ವದ ಪುರುಷರ ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದು ಆರ್‌ಸಿಬಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಮಹಿಳಾ ತಂಡದ ಗೆಲುವು ಮತ್ತು ಪುರುಷರ ತಂಡದ ಗೆಲುವು ಎರಡೂ ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಸಂಭ್ರಮವನ್ನು ತಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು. ಜೂನ್ 3, 2025 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಆರ್‌ಸಿಬಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಫೈನಲ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 190 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತಂಡವು 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಆರ್‌ಸಿಬಿ 17 ವರ್ಷಗಳ ದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಇದಕ್ಕೂ ಮೊದಲು ಆರ್ಸಿಬಿ 2009, 2011 ಮತ್ತು 2016 ರಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಆದರೆ ಕಳೆದೊಂದು ವರ್ಷದಿಂದ ಆರ್ಸಿಬಿ ಅದೃಷ್ಟ ಬದಲಾಗಿದ್ದು, ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!