ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಅವರ ಬದುಕು , ನಮ್ಮೆಗೆಲ್ಲ ಪ್ರೇರಣೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಮನಮೋಹನ್ ಸಿಂಗ್ ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ…

ಬೆಳಗಾವಿ :- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ. ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು.

ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಮನಮೋಹನ್ ಸಿಂಗ್ ರವರೊಂದಿಗಿನ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೂ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದರು.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!