ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;

ಜಾರ್ಜಿಯಾದ ನ್ಯಾಯಾಲಯವೊಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಒಂದು ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ದಂಪತಿ ದತ್ತು ಪಡೆದ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋಗಳನ್ನು ಮಾಡಿ ಮಾರಾಟ ಮಾಡಿದ್ದರು. ಈ ಘಟನೆಯು ‘ಹೌಸ್ ಆಫ್ ಹಾರರ್’ ಎಂದು ನ್ಯಾಯಾಲಯ ಬಣ್ಣಿಸಿದ್ದು, ಜೊತೆಗೆ ದತ್ತು ಪಡೆಯುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಜಾಗೃತೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ಅಮೆರಿಕದ ಜಾರ್ಜಿಯಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಪರಾಧದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಧೀಶರು ಅವರಿಗೆ ಪೆರೋಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದರಿಂದ ಇಬ್ಬರೂ ಈಗ ತಮ್ಮ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ.

34 ವರ್ಷದ ವಿಲಿಯಂ ಮತ್ತು 36 ವರ್ಷದ ಜಕಾರಿ ಜುಲಾಕ್ ಎಂಬ ಸಲಿಂಗಕಾಮಿಗಳು ಇತ್ತೀಚಿಗಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ವರ್ಷಗಳ ಬಳಿಕ ಈ ಜೋಡಿ 12 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದು, ಈ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಅಪರಾಧಿಗಳು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸ್ನೇಹಿತರಿಗೆ ಮಾರಾಟ ಮಾಡಿದ್ದಾರೆ.
ವಾಲ್ಟನ್ ಕೌಂಟಿ ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯ ಮೇಲೆ ದಾಳಿ ನಡೆಸಿದ್ದು, ತನಿಖೆಯ ವೇಳೆ ಕಂಡುಬಂದ ದೃಶ್ಯಗಳನ್ನು ನೋಡಿ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ವರದಿಯ ಪ್ರಕಾರ, ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯಿಂದ 7TB ಗಿಂತ ಹೆಚ್ಚಿನ ಡಿಜಿಟಲ್ ಡೇಟಾ ಮತ್ತು ಗ್ರಾಫಿಕ್ ಫೋಟೋಗಳು ಮತ್ತು ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ಮುಂದೆ ನಿರ್ಗತಿಕ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದೆ ಬರುವ ಜನರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದು ನ್ಯಾಯಲಯ ಎಚ್ಚರಿಕೆ ನೀಡಿದೆ. ಇಬ್ಬರು ಅನಾಥ ಮಕ್ಕಳನ್ನು ಈ ರೀತಿ ಬಳಸಿಕೊಂಡ ಸಲಿಂಗಕಾಮಿ ದಂಪತಿಗಳ ಮನೆಯನ್ನು ‘ಹೌಸ್ ಆಫ್ ಹಾರರ್’ ಎಂದು ಬಣ್ಣಿಸಿದ ನ್ಯಾಯಾಲಯ, ಈ ದಂಪತಿಗೆ 100 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!