ಮಗ ಮದುವೆಯಾಗಬೇಕಿದ್ದ ಯುವತಿ ಜೊತೆ ಓಡಿಹೋಗಿ ವಿವಾಹವಾದ ಅಪ್ಪ!…ಊರಿನಿಂದ ಬಹಿಷ್ಕಾರ ಮಾಡಿದ ಗ್ರಾಮಸ್ಥರು…

ಮಗ ಮದುವೆಯಾಗಬೇಕಾಗಿದ್ದ ಯುವತಿಯನ್ನು ನೋಡಿದ ಆತನ ಅಪ್ಪನಿಗೆ ಆಕೆಯ ಮೇಲೆ ಲವ್ ಎಟ್ ಫಸ್ಟ್ ಸೈಟ್ ಆಗಿತ್ತು! ತನಗೆ ಸೊಸೆಯಾಗಬೇಕಾದವಳನ್ನು ತನ್ನವಳನ್ನಾಗಿ ಮಾಡಿಕೊಳ್ಳಬೇಕೆಂದು ಬಯಸಿದ ಆತ ಆಕೆಯ ಜೊತೆ ಓಡಿಹೋಗಿ ತಾನೇ ಮದುವೆಯಾಗಿದ್ದಾನೆ. ಈ ಮೂಲಕ ಆತ ತನ್ನ ಮಗನಿಗೆ ಶಾಕ್ ನೀಡಿದ್ದಾನೆ. ಉತ್ತರ ಪ್ರದೇಶದ ರಾಂಪುರದಲ್ಲಿ ಈ ಘಟನೆ ನಡೆದಿದೆ. ಅವರಿಬ್ಬರನ್ನೂ ಗ್ರಾಮ ಪಂಚಾಯತ್ ನಿಂದ ಗಡೀಪಾರು ಮಾಡಲಾಗಿದೆ.

ತಂದೆಯೊಬ್ಬ ತನ್ನ ಮಗ ಮದುವೆಯಾಗಬೇಕಿದ್ದ ಯುವತಿಯನ್ನು ಮದುವೆಯಾದ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ತನ್ನ ಸೊಸೆಯಾಗಬೇಕಿದ್ದ ಯುವತಿಯನ್ನು ಮದುವೆಯಾದ ವ್ಯಕ್ತಿ ಆಕೆಯೊಂದಿಗೆ ಊರಿಗೆ ಹಿಂತಿರುಗಿದಾಗ ಅವ್ಯವಸ್ಥೆ ಭುಗಿಲೆದ್ದಿತು. ಇದು ಅವನ ಮಗನೊಂದಿಗೆ ಜಗಳಕ್ಕೆ ಕಾರಣವಾಯಿತು. ತನ್ನ ಸೊಸೆಯಾಗಬೇಕಾದವಳು ಸವತಿಯಾಗಿ ಬಂದಿದ್ದನ್ನು ಕಂಡ ತಾಯಿ ತನ್ನ ಗಂಡ ಮತ್ತು ಆತನ ಹೊಸ ಹೆಂಡತಿಯ ಜೊತೆ ಜಗಳವಾಡಿ, ಅವರಿಬ್ಬರನ್ನೂ ಮನೆಯಿಂದ ಹೊರಗೆ ಹಾಕಿದರು. ಶಕೀಲ್ ಎಂಬ ಯುವಕ ಮದುವೆಯಾಗಬೇಕಿದ್ದ ಯುವತಿಯನ್ನು ಆತನ 55 ವರ್ಷದ ತಂದೆ ಮದುವೆಯಾಗಿದ್ದಾನೆ. ಇದರಿಂದ ಜಗಳ ಹೆಚ್ಚಾಗಿ, ಕೊನೆಗೆ ಆ ಗ್ರಾಮಸ್ಥರು ಅವರಿಬ್ಬರನ್ನೂ ಗಡಿಪಾರು ಮಾಡಿದ್ದಾರೆ.

ಈ ಮದುವೆ ನವ ವಧು ಮತ್ತು ಅವಳ ಅತ್ತೆಯ ನಡುವೆ ಕೂಡ ತೀವ್ರ ಘರ್ಷಣೆಗೆ ಕಾರಣವಾಯಿತು. ಶಕೀಲ್ ಈ ಬಗ್ಗೆ ಆರೋಪಿಸಿದ್ದು, ನಾನು ಮದುವೆಯಾಗಬೇಕಿದ್ದ ಯುವತಿಯನ್ನು ಅಪ್ಪ ಮದುವೆಯಾಗಬೇಕೆಂದುಕೊಂಡಿರುವುದು ನನ್ನ ಅಜ್ಜಿಗೂ ತಿಳಿದಿತ್ತು. ಅವರೇ ಅಪ್ಪನಿಗೆ ಮದುವೆಯಾಗಲು ಸಹಾಯ ಮಾಡಿದರು ಎಂದು ಆತ ಆರೋಪಿಸಿದ್ದಾನೆ. ಒಂದು ವರ್ಷದ ಹಿಂದೆ ಅಜೀಮ್ ನಗರ ಪೊಲೀಸ್ ಠಾಣೆ ಪ್ರದೇಶದ ಹುಡುಗಿಯ ಜೊತೆ ತನ್ನ ಮಗನ ಮದುವೆ ನಿಶ್ಚಯ ಮಾಡಿದ್ದ 55 ವರ್ಷದ ವ್ಯಕ್ತಿ, ತನ್ನ ಭಾವಿ ಸೊಸೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದಾಗ ಕ್ರಮೇಣ ಅವಳ ಬಗ್ಗೆ ಪ್ರೀತಿ ಬೆಳೆಸಿಕೊಂಡಿದ್ದರು. ಅವರ ಕುಟುಂಬಗಳಿಗೆ ತಿಳಿಯದೆ ಅವರ ಸಂಬಂಧ ಪ್ರಣಯ ಸಂಬಂಧವಾಗಿ ಮಾರ್ಪಟ್ಟಿತು.ಈ ಹಿಂದೆ ಅಲಿಗಢದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಅಲ್ಲಿ ಒಬ್ಬ ವರ ಮತ್ತು ಅವನ ಭಾವಿ ಅತ್ತೆ ಓಡಿಹೋಗಿದ್ದರು. ಏಪ್ರಿಲ್ ಆರಂಭದಲ್ಲಿ ಬಿಹಾರದ ನೇಪಾಳ ಗಡಿಯ ಬಳಿ ಅವರನ್ನು ಪತ್ತೆಹಚ್ಚಿ ಬಂಧಿಸಲಾಯಿತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!