ಮಗ ಮದುವೆಯಾಗಬೇಕಿದ್ದ ಯುವತಿ ಜೊತೆ ಓಡಿಹೋಗಿ ವಿವಾಹವಾದ ಅಪ್ಪ!…ಊರಿನಿಂದ ಬಹಿಷ್ಕಾರ ಮಾಡಿದ ಗ್ರಾಮಸ್ಥರು…

ಮಗ ಮದುವೆಯಾಗಬೇಕಾಗಿದ್ದ ಯುವತಿಯನ್ನು ನೋಡಿದ ಆತನ ಅಪ್ಪನಿಗೆ ಆಕೆಯ ಮೇಲೆ ಲವ್ ಎಟ್ ಫಸ್ಟ್ ಸೈಟ್ ಆಗಿತ್ತು! ತನಗೆ ಸೊಸೆಯಾಗಬೇಕಾದವಳನ್ನು ತನ್ನವಳನ್ನಾಗಿ ಮಾಡಿಕೊಳ್ಳಬೇಕೆಂದು ಬಯಸಿದ ಆತ ಆಕೆಯ ಜೊತೆ ಓಡಿಹೋಗಿ ತಾನೇ ಮದುವೆಯಾಗಿದ್ದಾನೆ. ಈ ಮೂಲಕ ಆತ ತನ್ನ ಮಗನಿಗೆ ಶಾಕ್ ನೀಡಿದ್ದಾನೆ. ಉತ್ತರ ಪ್ರದೇಶದ ರಾಂಪುರದಲ್ಲಿ ಈ ಘಟನೆ ನಡೆದಿದೆ. ಅವರಿಬ್ಬರನ್ನೂ ಗ್ರಾಮ ಪಂಚಾಯತ್ ನಿಂದ ಗಡೀಪಾರು ಮಾಡಲಾಗಿದೆ.

ತಂದೆಯೊಬ್ಬ ತನ್ನ ಮಗ ಮದುವೆಯಾಗಬೇಕಿದ್ದ ಯುವತಿಯನ್ನು ಮದುವೆಯಾದ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ತನ್ನ ಸೊಸೆಯಾಗಬೇಕಿದ್ದ ಯುವತಿಯನ್ನು ಮದುವೆಯಾದ ವ್ಯಕ್ತಿ ಆಕೆಯೊಂದಿಗೆ ಊರಿಗೆ ಹಿಂತಿರುಗಿದಾಗ ಅವ್ಯವಸ್ಥೆ ಭುಗಿಲೆದ್ದಿತು. ಇದು ಅವನ ಮಗನೊಂದಿಗೆ ಜಗಳಕ್ಕೆ ಕಾರಣವಾಯಿತು. ತನ್ನ ಸೊಸೆಯಾಗಬೇಕಾದವಳು ಸವತಿಯಾಗಿ ಬಂದಿದ್ದನ್ನು ಕಂಡ ತಾಯಿ ತನ್ನ ಗಂಡ ಮತ್ತು ಆತನ ಹೊಸ ಹೆಂಡತಿಯ ಜೊತೆ ಜಗಳವಾಡಿ, ಅವರಿಬ್ಬರನ್ನೂ ಮನೆಯಿಂದ ಹೊರಗೆ ಹಾಕಿದರು. ಶಕೀಲ್ ಎಂಬ ಯುವಕ ಮದುವೆಯಾಗಬೇಕಿದ್ದ ಯುವತಿಯನ್ನು ಆತನ 55 ವರ್ಷದ ತಂದೆ ಮದುವೆಯಾಗಿದ್ದಾನೆ. ಇದರಿಂದ ಜಗಳ ಹೆಚ್ಚಾಗಿ, ಕೊನೆಗೆ ಆ ಗ್ರಾಮಸ್ಥರು ಅವರಿಬ್ಬರನ್ನೂ ಗಡಿಪಾರು ಮಾಡಿದ್ದಾರೆ.

ಈ ಮದುವೆ ನವ ವಧು ಮತ್ತು ಅವಳ ಅತ್ತೆಯ ನಡುವೆ ಕೂಡ ತೀವ್ರ ಘರ್ಷಣೆಗೆ ಕಾರಣವಾಯಿತು. ಶಕೀಲ್ ಈ ಬಗ್ಗೆ ಆರೋಪಿಸಿದ್ದು, ನಾನು ಮದುವೆಯಾಗಬೇಕಿದ್ದ ಯುವತಿಯನ್ನು ಅಪ್ಪ ಮದುವೆಯಾಗಬೇಕೆಂದುಕೊಂಡಿರುವುದು ನನ್ನ ಅಜ್ಜಿಗೂ ತಿಳಿದಿತ್ತು. ಅವರೇ ಅಪ್ಪನಿಗೆ ಮದುವೆಯಾಗಲು ಸಹಾಯ ಮಾಡಿದರು ಎಂದು ಆತ ಆರೋಪಿಸಿದ್ದಾನೆ. ಒಂದು ವರ್ಷದ ಹಿಂದೆ ಅಜೀಮ್ ನಗರ ಪೊಲೀಸ್ ಠಾಣೆ ಪ್ರದೇಶದ ಹುಡುಗಿಯ ಜೊತೆ ತನ್ನ ಮಗನ ಮದುವೆ ನಿಶ್ಚಯ ಮಾಡಿದ್ದ 55 ವರ್ಷದ ವ್ಯಕ್ತಿ, ತನ್ನ ಭಾವಿ ಸೊಸೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದಾಗ ಕ್ರಮೇಣ ಅವಳ ಬಗ್ಗೆ ಪ್ರೀತಿ ಬೆಳೆಸಿಕೊಂಡಿದ್ದರು. ಅವರ ಕುಟುಂಬಗಳಿಗೆ ತಿಳಿಯದೆ ಅವರ ಸಂಬಂಧ ಪ್ರಣಯ ಸಂಬಂಧವಾಗಿ ಮಾರ್ಪಟ್ಟಿತು.ಈ ಹಿಂದೆ ಅಲಿಗಢದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಅಲ್ಲಿ ಒಬ್ಬ ವರ ಮತ್ತು ಅವನ ಭಾವಿ ಅತ್ತೆ ಓಡಿಹೋಗಿದ್ದರು. ಏಪ್ರಿಲ್ ಆರಂಭದಲ್ಲಿ ಬಿಹಾರದ ನೇಪಾಳ ಗಡಿಯ ಬಳಿ ಅವರನ್ನು ಪತ್ತೆಹಚ್ಚಿ ಬಂಧಿಸಲಾಯಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!