ಮಾನವೀಯತೆಗೆ ಮಾದರಿಯಾದ ಮಾನವ…. ದೇವರಂತೆ ಬಂದು ಅಜ್ಜಿ ಹಾಗೂ ಗೋವಿನ ಹಸಿವು ನೀಗಿಸಿದ ವ್ಯಕ್ತಿ…

ಇದು ಕಲಿಯುಗ, ಎಂತಹ ಚಿತ್ರ ವಿಚಿತ್ರ ಘಟನೆಗಳನ್ನು ನಾವು ನೋಡ್ತಾ ಇರ್ತೀವಿ ಹಾಗೂ ಕೇಳ್ತಾ ಇರ್ತೀವಿ. ಹೆತ್ತ ತಂದೆ ತಾಯಿಗಳನ್ನೇ ನೋಡಿಕೊಳ್ಳಲು ಹಿಂಜರಿಯುವ ಈ ಕಾಲದಲ್ಲಿ ವ್ಯಕ್ತಿಯೊಬ್ಬ ತರಕಾರಿ ಮಾರುವ ಅಜ್ಜೀ ಹಾಗೂ ಹಸುವಿನ ಹೊಟ್ಟೆ ತುಂಬಿಸಿದ್ದಾನೆ.ಕೆಲವರು ಏನು ಪ್ರತಿಫಲ ಅಪೇಕ್ಷಿಸದೇ ಇನ್ನೊಬ್ಬರಿಗೆ ಸಹಾಯ ಮಾಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಇಂತಹ ಕೆಲವು ವಿಡಿಯೋಗಳು ಮನಸ್ಸಿಗೆ ತುಂಬಾನೇ ಹತ್ತಿರವಾಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ದುಡಿಯುವ ಕೈಗೆ ಆಸರೆಯಾಗದ್ದು, ಹಸಿದ ಗೋವಿಗೆ ಅನ್ನದಾತನಾಗಿದ್ದು, ಅದರಲ್ಲೇ ಸಂತೋಷ ಕಂಡುಕೊಂಡಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ವ್ಯಕ್ತಿಯ ಹೃದಯಶ್ರೀಮಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈಗಿನ ಕಾಲದಲ್ಲಿ ಮಾನವೀಯತೆ ಹಾಗೂ ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ವ್ಯಕ್ತಿಗಳನ್ನು ನೋಡುವುದೇ ಕಷ್ಟ. ಒಬ್ಬರ ಹಸಿವನ್ನು ನೀಗಿಸುವುದು ಹಾಗೂ ಮುಖದಲ್ಲಿ ನಗು ತರಿಸುವುದು ಅಷ್ಟು ಸುಲಭವಲ್ಲ. ಈಗಿನ ಕಾಲದಲ್ಲಿ ಎಲ್ಲರಿಗೂ ಇಂತಹ ಮನಸ್ಸು ಇರುವುದಿಲ್ಲ. ಆದರೆ ಕಷ್ಟಕ್ಕೆ ಮರುಗುವ, ಇನ್ನೊಬ್ಬರಿಗೆ ಸಾಹಸ ಮಾಡುವ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದಕ್ಕೆ ಉದಾಹರಣೆ ಎನ್ನುವಂತಹ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಇಲ್ಲೊಬ್ಬ ಮಹಾನುಭಾವ ಗೋವಿನ ಹಸಿವನ್ನು ನೀಗಿಸಿ, ಹಿರಿ ಜೀವಕ್ಕೆ ಆಸರೆಯಾಗುವ ಮೂಲಕ ಅಜ್ಜಿಯ ಮುಖದಲ್ಲಿ ನಗುವನ್ನು ಮೂಡಿಸಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ವ್ಯಕ್ತಿಯೂ ಗುಣವನ್ನು ಕೊಂಡಾಡಿದ್ದಾರೆ.

ವ್ಯಕ್ತಿಯೊಬ್ಬನು ಕ್ಯಾರೆಟ್ ತಿನ್ನುತ್ತಾ ನಿಂತಿರುವುದನ್ನು ನೋಡಬಹುದು. ಆ ಬಳಿಕ ಗೋವೊಂದು ಈತನ ಬಳಿ ಬಂದು ಕೈಯಲ್ಲಿದ್ದ ಕ್ಯಾರೆಟ್ ತಿಂದಿದೆ. ತದನಂತರದಲ್ಲಿ ರಸ್ತೆಯ ಬಳಿ ಕ್ಯಾರೆಟ್ ಮಾರಾಟ ಮಾಡುತ್ತಿದ್ದ ಅಜ್ಜಿಯ ಬಳಿ ಹೋಗಿದ್ದು ಆಕೆಯ ಬಳಿಯಿದ್ದ ಎಲ್ಲಾ ಕ್ಯಾರೆಟನ್ನು ತಾನೇ ಖರೀದಿಸಿದ್ದಾನೆ. ಅಜ್ಜಿಯ ಕೈಗೆ ಒಂದಿಷ್ಟು ಹಣವನ್ನು ಇಟ್ಟು ಅಲ್ಲಿಂದ ಹೊರಟಿದ್ದಾನೆ. ತದನಂತರದಲ್ಲಿ ತಾನು ಖರೀದಿಸಿರುವ ಕ್ಯಾರೆಟ್ ಎಲ್ಲವನ್ನು ಅಲ್ಲೇ ಇದ್ದ ಹಸುಗಳಿಗೆ ತಿನ್ನಲು ಇಟ್ಟು ಅವುಗಳ ಹಸಿವನ್ನು ನೀಗಿಸಿರುವುದನ್ನು ನೀವಿಲ್ಲಿ ನೋಡಬಹುದು.ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರು ಈತನ ಮಾಡಿದ ಒಳ್ಳೆಯ ಕೆಲಸಕ್ಕೆ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ಪ್ರಾಣಿಗಳು ಒಳ್ಳೆಯ ವ್ಯಕ್ತಿಗಳನ್ನು ಬಹುಬೇಗನೇ ಗುರುತಿಸುತ್ತವೆ’ ಎಂದಿದ್ದಾರೆ. ಇನ್ನೊಬ್ಬರು, ‘ಇಂತಹ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತದೆ. ಸ್ವಾರ್ಥಿಗಳ ಪ್ರಪಂಚದಲ್ಲಿ ಈ ವ್ಯಕ್ತಿ ಮಾಡುವ ಕೆಲಸಗಳು ಎಲ್ಲರಿಗೂ ಮಾದರಿ’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊರ್ವ ಬಳಕೆದಾರರು, ‘ಈ ಜಗತ್ತಿನ ಎಲ್ಲಾ ಗೌರವವು ನಿಮ್ಮಂತಹ ವ್ಯಕ್ತಿಗೆ ಸಿಗಬೇಕು’ಎಂದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!