ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.

ನವದೆಹಲಿ :- ಮಂಡ್ಯ ಜಿಲ್ಲೆ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಆಫ್ ನೇಷನ್-2024 ಎಂಚಾಟಿಂಗ್ ವಿಭಾಗದ ಕಿರೀಟವನ್ನು ಗೆದ್ದಿದ್ದಾರೆ. ಪಶು ವೈದ್ಯೆಯಾಗಿರುವ ಇವರು ಭಾರತೀಯ ಸೇನೆಯ ಕರ್ನಲ್ ಸಂಜೀತ್ ಅವರ ಪತ್ನಿ, ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಕಿರೀಟವು ಕನ್ನಡತಿ ಡಾ.ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ.
ನವದೆಹಲಿಯಲ್ಲಿ ಐದು ದಿನಗಳು ನಡೆದ ಅಂತಿಮ ಸುತ್ತಿನಲ್ಲಿ ಕರ್ನಾ ಟಕದ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದ್ದಾರೆ. ಜೊತೆಗೆ ಅದೇ ವೇದಿಕೆಯಲ್ಲಿ ಸೋಷಿ ಯಲ್ ಇನ್ನುಯೆನ್ಸರ್ ಗೌರವಕ್ಕೂ ಪಾತ್ರ ರಾಗಿದ್ದಾರೆ. ವೃತ್ತಿಯಿಂದ ಪಶುವೈದ್ಯರಾದ ಡಾ ಪ್ರಿಯಾ ಗೋಸ್ವಾಮಿ, ಮೂಲತಃ ಪಂಜಾಬಿಯಾದರೂ ಗೋವಾದಲ್ಲಿ ಬೆಳೆ ದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿ ದ್ದಾರೆ.
ಭಾರತೀಯ ಸೇನೆಯಲ್ಲಿರುವ ಇವರ ಪತಿ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು. ಮದ್ದೂರಿನ ಎಚ್.ಕೆ. ವೀರಣ್ಣಗೌಡ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ.ಸಿದ್ದೇಗೌಡ ಅವರ ಪುತ್ರರಾದ ಕರ್ನಲ್ ಸಂಜೀತ್, ಪ್ರಸ್ತುತ ಉತ್ತರಖಾಂಡ್‌ನಲ್ಲಿ ಭಾರತೀಯ ಸೇನೆಯ ಕುದುರೆ ತರಬೇತಿ ವಿಭಾಗದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ. ಪಶುವೈದ್ಯರಾಗಿರುವ ಡಾ.ಪ್ರಿಯಾ
ಕೂಡ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿ ದ್ದಾರೆ. 16 ವರ್ಷದ ಮಗಳು ಧ್ರುವಿ ಸಂಜಿತ್ ಹಾಗೂ 9 ವರ್ಷದ ಮಗ ಶೌರ್ಯಗೌಡ, ಮಾವ ಸಿದ್ದೇಗೌಡ, ಅತ್ತೆ ಸುಮಿತ್ರಮ್ಮ ಅವರ ಸಹಕಾರ ಹಾಗೂ ಪತಿ ಕರ್ನಲ್ ಸಂಜಿತ್, ನಾದಿನಿ ಸುಪ್ರೀತಾ ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ಡಾ.ಪ್ರಿಯಾ ಗೋಸ್ವಾಮಿ ಸಂತಸ ಹಂಚಿಕೊಂಡಿ ದ್ದಾರೆ. ಈ ಕಾರ್ಯಕ್ರಮದ ನಿರ್ದೇಶಕ ರಾದ ಭಾರ್ಕಾ ನಂಗಿಯಾ ಮತ್ತು ಅಭಿಷೇಕ್ ಅವರ ಸಲಹೆಗಳೇ ಗೆಲುವಿಗೆ ದಾರಿ ತೋರಿಸಿದವು ಎಂದು ಸ್ಮರಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!