ಮುಖ್ಯಮಂತ್ರಿ ಹಂಚಿಕೆ ಕಿತ್ತಾಟಕ್ಕೆ ತೆರೆ ಎಳೆದ ಸಿಎಂ. ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಮಾತು!

ಬೆಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ವಿಧಾನ ಮಂಡಲದಲ್ಲಿ ಮಾತಾಡುವಾಗ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಒನ್ಸ್ ಫಾರ್ ಆಲ್ ತೆರೆ ಎಳೆದರು ಅಂತ ಹೇಳಿದರೆ ಪ್ರಾಯಶಃ ಉತ್ಪ್ರೇಕ್ಷೆ ಅನಿಸದು. ಅವರು ಹೇಳಿದ ಮಾತಿನಲ್ಲಿ ದೃಢತೆ ಮತ್ತು ಸ್ಪಷ್ಟತೆಯನ್ನು ಗುರುತಿಸಬಹುದು. ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರಿಯುವ ಬಗ್ಗೆ ಉದ್ದೇಶಪೂರ್ವಕವಾಗಿ ಕಾಲೆಳೆಯುತ್ತಾರೆ. 2018 ರಲ್ಲೂ ಅವರು ಮುಖ್ಯಮಂತ್ರಿಯಾಗಿ ತಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದರು, ಅದು ಸುಳ್ಳಾಯಿತು, ಅವರ ಪಕ್ಷ ಅಧಿಕಾರಕ್ಕೂ ಬರಲಿಲ್ಲ ಎಂದು ಹೇಳಿದ ಅಶೋಕ, ಕುಳಿತಿದ್ದ ಸಿದ್ದರಾಮಯ್ಯ ಕಡೆ ತಿರುಗಿ ಐದು ವರ್ಷ ನೀವೇ ಸಿಎಂ ಆಗಿರ್ತೀರಾ? ಅನ್ನುತ್ತಾರೆ.


ಪ್ರಾಯಶಃ ಇಂಥದೊಂದು ಅವಕಾಶಕ್ಕಾಗಿ ಕಾಯುತ್ತಿದ್ದ ಸಿದ್ದರಾಮಯ್ಯ, ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ, ಮತ್ತು ಅದಾದ ನಂತರದ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಎಂದು ನಿರ್ಭಾವುಕಾರಾಗಿ ಹೇಳುತ್ತಾರೆ. ಅವರ ಮಾತುಗಳಿಗೆ ಬಿಜೆಪಿ ಶಾಸಕರು ಸುಮ್ಮನಾಗಿರಬಹುದು, ಅದರೆ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿದೆ. ಹೈಕಮಾಂಡ್ ಸಮಕ್ಷಮ ಡಿಕೆ ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಏನು ಒಪ್ಪಂದ ಮಾಡಿಕೊಂಡಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ.
ಅದರೆ ಶಿವಕುಮಾರ್ ಮತ್ತು ಅವರ ಬೆಂಬಲಿಗರು ಎರಡೂವರೆ ವರ್ಷದ ನಂತರ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲಿದ್ದಾರೆ ಅಂತ ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂದು ಸದನದಲ್ಲಿ ಆಡಿದ ಮಾತು ವಿರೋಧಿ ಕ್ಯಾಂಪಲ್ಲಿ ಗೊಂದಲ ಮತ್ತು ಆತಂಕ ಮೂಡಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!