ಮೆಹೆಂದಿ ಗರ್ಭಿಣಿಯರಿಗೆ ಹಾನಿಕಾರಕವೇ? ಇಲ್ಲಿದೆ ವೈದ್ಯರು ನೀಡಿರುವ ಮಾಹಿತಿ.

ಮಹಿಳೆಯರು ಹಬ್ಬ, ಮದುವೆ ಹೀಗೆ ಯಾವುದೇ ರೀತಿಯ ಆಚರಣೆ ಮೆಹೆಂದಿ ಹಚ್ಚಿಕೊಳ್ಳುತ್ತಾರೆ. ಇದೊಂದು ರೀತಿಯ ಹೆಣ್ಣು ಮಕ್ಕಳ ಅಂದ ಹೆಚ್ಚಿಸುವ ಅಲಂಕಾರಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದು ಕೇವಲ ಕೈಗಳ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲ ಅದರ ಹೊರತಾಗಿ, ಇದು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಆದರೆ ಕೆಲವು ಕಡೆಗಳಲ್ಲಿ ಗರ್ಭಿಣಿಯರು ಮೆಹಂದಿಯನ್ನು ಹಚ್ಚಿಕೊಳ್ಳಬಾರದು ಎನ್ನುತ್ತಾರೆ ಇದು ನಿಜವೇ? ಮೆಹೆಂದಿ ಗರ್ಭಿಣಿಯರಿಗೆ ಹಾನಿಕಾರಕವೇ? ಗರ್ಭಾವಸ್ಥೆಯಲ್ಲಿ ಕೆಲವು ಮಹಿಳೆಯರು ಗೋರಂಟಿ ಹಚ್ಚಲು ಹೆದರಲು ಕಾರಣವೇನು? ಇಲ್ಲಿದೆ ವೈದ್ಯರು ನೀಡಿರುವ ಮಾಹಿತಿ

ಸಾಮಾನ್ಯವಾಗಿ ನಮ್ಮಲ್ಲಿ ಎಲ್ಲಾ ರೀತಿಯ ಶುಭ ಕಾರ್ಯಕ್ರಮಗಳಲ್ಲಿಯೂ ಮೆಹೆಂದಿ ಅಥವಾ ಗೋರಂಟಿ ಹಾಕಿಕೊಳ್ಳುವುದು ವಾಡಿಕೆ. ಮಹಿಳೆಯರು ಹಬ್ಬ, ಮದುವೆ ಹೀಗೆ ಯಾವುದೇ ರೀತಿಯ ಆಚರಣೆ ಇರಲಿ ಇದನ್ನು ಹಚ್ಚಿಕೊಳ್ಳುತ್ತಾರೆ. ಇದೊಂದು ರೀತಿಯ ಹೆಣ್ಣು ಮಕ್ಕಳ ಅಂದ ಹೆಚ್ಚಿಸುವ ಅಲಂಕಾರಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದು ಕೇವಲ ಕೈಗಳ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲ ಅದರ ಹೊರತಾಗಿ, ಇದು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಎಂಬ ನಂಬಿಕೆ ಇದೆ.
ಇತ್ತೀಚೆಗೆ, ಇನ್ಸ್ಟಾ ಗಳಲ್ಲಿ ಬಹಳ ಕಳವಳಕಾರಿ ಹೇಳಿಕೆಗಳು ಬಿತ್ತರಿಸಲಾರಂಭಿಸಿದ್ದವು. ಅದೇನೆಂದರೆ, ಗರ್ಭಾವಸ್ಥೆಯಲ್ಲಿ ಮೆಹೆಂದಿ ಅಥವಾ ಗೋರಂಟಿ ಹಚ್ಚುವುದರಿಂದ ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಯಿತು. ಕೆಲವರು ಫೋಟೋ ಗಳಿಗಾಗಿ ತಮ್ಮ ಹೊಟ್ಟೆಯ ಮೇಲೆ ಮೆಹೆಂದಿ ಹಾಕಿಕೊಳ್ಳುತ್ತಿದ್ದು ಇದು ಕೂಡ ಈ ರೀತಿಯ ಸುದ್ದಿ ಹಬ್ಬಲು ಕಾರಣವಾಗಿರಬಹುದು. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಇದನ್ನು ನಂಬಿದ ಹಲವು ಮಹಿಳೆಯರು ಗರ್ಭಾವಸ್ಥೆಯಲ್ಲಿ ಗೋರಂಟಿ ಹಚ್ಚುವುದು ನಿಜವಾಗಿಯೂ ಮಗುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಿದರು. ಹಾಗಾದರೆ ಇದರಲ್ಲಿ ಎಷ್ಟು ಸತ್ಯವಿದೆ?

ಈ ಬಗ್ಗೆ ವೈದ್ಯರು ಹೇಳುವುದೇನು?
ಆರೋಗ್ಯ ತಜ್ಞರು ಮತ್ತು ಸ್ತ್ರೀರೋಗ ತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಈ ವಿಷಯ ಸತ್ಯವಲ್ಲ. ಇದಕ್ಕೆ ಯಾವುದೇ ರೀತಿಯ ವೈಜ್ಞಾನಿಕ ಆಧಾರವಿಲ್ಲ. ಗೋರಂಟಿ ನೈಸರ್ಗಿಕ ಬಣ್ಣ. ಇದು ಚರ್ಮದ ಹೊರ ಪದರವನ್ನು ಮಾತ್ರ ರಂಗೆರಿಸುತ್ತವೆ ಇದು ದೇಹದ ಒಳಗೆ ಹೋಗುವುದಿಲ್ಲ ಆದ್ದರಿಂದ ಮಗುವಿನ ಚರ್ಮದ ಮೇಲೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಅಥವಾ ಬೆಳವಣಿಗೆಯ ಮೇಲೆ ಪರಿಣಾಮ ಬೀರುವುದಿಲ್ಲ. ಅದರಲ್ಲಿಯೂ ಮಗುವಿನ ಚರ್ಮದ ಬಣ್ಣವು ಆನುವಂಶಿಕ ಅಂಶ ಮತ್ತು ಮೆಲನಿನ್ ಉತ್ಪಾದನೆಯಿಂದ ನಿರ್ಧರಿಸಲ್ಪಡುತ್ತದೆಯೇ ಹೊರತು ತಾಯಿಯ ಚರ್ಮಕ್ಕೆ ಅನ್ವಯಿಸುವ ಯಾವುದರಿಂದಲೂ ಅಲ್ಲ ಎಂದಿದ್ದಾರೆ. ಆದರೆ ಗರ್ಭಾವಸ್ಥೆಯಲ್ಲಿ, ಮಹಿಳೆಯರು ಪ್ಯಾರಾ- ಫಿನೈಲೆನಾಡಿಯಮೈನ್ (ಪಿಪಿಡಿ) ನಂತಹ ರಾಸಾಯನಿಕ ಅಂಶವಿರುವ ಗೋರಂಟಿಯನ್ನು ಅನ್ವಯಿಸದಂತೆ ಎಚ್ಚರಿಕೆ ವಹಿಸಬೇಕು. ಕೃತಕ ಗೋರಂಟಿ ಹಚ್ಚುವುದನ್ನು ತಪ್ಪಿಸಿ. ಯಾವಾಗಲೂ ನೈಸರ್ಗಿಕ ಗೋರಂಟಿ ಬಳಸುವುದು ಬಹಳ ಒಳ್ಳೆಯದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!