ಯಡಿಯೂರಪ್ಪನವರು ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ; ಸಿಎಂ ವ್ಯಂಗ್ಯ.

ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ.
ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ ಎಂದು ಸವಾಲು ಹಾಕಿದರು. ಎಲ್ಲಾ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿ.ಗಳನ್ನು ಮುಚ್ಚುವುದಿಲ್ಲ. ಆದರೆ ಸಚಿವಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.

ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು,, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ದದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ . ಆದರೆ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ , ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ ಎಂದರು.
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ.

ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ , 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ. ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!