ಯಡಿಯೂರಪ್ಪನವರು ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ; ಸಿಎಂ ವ್ಯಂಗ್ಯ.

ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ.
ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ ಎಂದು ಸವಾಲು ಹಾಕಿದರು. ಎಲ್ಲಾ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿ.ಗಳನ್ನು ಮುಚ್ಚುವುದಿಲ್ಲ. ಆದರೆ ಸಚಿವಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.

ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು,, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ದದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ . ಆದರೆ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ , ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ ಎಂದರು.
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ.

ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ , 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ. ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!