ಯೂನಿವರ್ಸಲ್ ಬಾಸ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್….

ಕನ್ನಡ ಹಾಡಿಗೆ ಎಗ್ಸೈಟ್ ಆದ ವಿಶ್ವಪ್ರಸಿದ್ಧ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್
‘ಲೈಫ್ ಈಸ್ ಕೆಸಿನೋ’ಎಂಬ ಈ ಹಾಡು ಕನ್ನಡ ಸಿನಿಮಾ ರಂಗದಲ್ಲಿ ಹೊಸ ಅಧ್ಯಾಯವನ್ನು ತೆರೆಯಲಿದೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಚಂದನ್ ಶೆಟ್ಟಿ ಅವರು ಈಗಾಗಲೇ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಅದರಲ್ಲೂ ಅವರ ಆಲ್ಬಂ ಸಾಂಗ್ಗಳು ತುಂಬಾನೇ ಫೇಮಸ್. ಈಗ ಅವರು ವೆಸ್ಟ್ ಇಂಡೀಸ್, ಆರ್ಸಿಬಿಯ ಮಾಜಿ ಆಟಗಾರ ಕ್ರಿಸ್ ಗೇಲ್ ಜೊತೆ ವಿಡಿಯೋ ಸಾಂಗ್ ಒಂದನ್ನು ಶೂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಚಂದನ್ ಶೆಟ್ಟಿ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಆಗಿದೆ. ಈ ವಿಡಿಯೋ ಸಾಂಗ್ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಚಂದನ್ ಶೆಟ್ಟಿ ಅವರು ಹಲವು ಹಿಟ್ ಹಾಡುಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹಾಡುಗಳಿಗೆ ದೊಡ್ಡ ಅಭಿಮಾನಿ ವರ್ಗ ಇದೆ. ಆದರೆ, ಇತ್ತೀಚೆಗೆ ಅವರು ಹಾಡುಗಳನ್ನು ಮಾಡೋದನ್ನು ಕಡಿಮೆ ಮಾಡಿದ್ದಾರೆ. ಅಷ್ಟಾಗಿ ಸಾಂಗ್ಗಳು ಅವರಿಂದ ಮೂಡಿ ಬಂದಿರಲಿಲ್ಲ. ಬದಲಿಗೆ ನಟನೆಯ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದರು. ಇದರ ಜೊತೆಗೆ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಯಿತು. ಈಗ ಅದೆಲ್ಲವನ್ನೂ ಮರೆತು ಮುಂದೆ ಸಾಗುತ್ತಿದ್ದಾರೆ.ಚಂದನ್ ಶೆಟ್ಟಿ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಚಂದನ್ ಶೆಟ್ಟಿ ಜೊತೆ ವಿಡಿಯೋ ಸಾಂಗ್ ಶೂಟ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

https://www.instagram.com/reel/DNNZBnLv3qD/?utm_source=ig_web_copy_link&igsh=MzRlODBiNWFlZA==

 

 

 

‘ನಾವು ಹಾಡು ಮಾಡುತ್ತಿದ್ದೇವೆ. ಅದರ ಹೆಸರು ಲೈಫ್ ಈಸ್ ಕೆಸಿನೋ. ನಾನು ಎಗ್ಸೈಟ್ ಆಗಿದ್ದೇನೆ. ನಾನು ಈ ಹಾಡಿನ ಫ್ಯಾನ್ ಆಗಿದ್ದೇನೆ’ ಎಂದಿದ್ದಾರೆ ಚಂದನ್ ಶೆಟ್ಟಿ. ಇದಕ್ಕೆ ಕ್ರಿಸ್ ಗೇಲ್ ಕೂಡ ಖುಷಿ ಆಗಿದ್ದು, ಅವರು ಹೆಮ್ಮೆಯಿಂದ ಈ ಬಗ್ಗೆ ಹೇಳಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಯಿರಿ ಎಂದಿದ್ದಾರೆ.ಕ್ರಿಸ್ ಗೇಲ್ ಅವರಿಗೆ ಬೆಂಗಳೂರಿನ ಬಗ್ಗೆ, ಕನ್ನಡಿಗರ ವಿಶೇಷ ಪ್ರೀತಿ ಇದೆ. ಇದಕ್ಕೆ ಕಾರಣ ಆರ್ಸಿಬಿ. ಅವರು ಹಲವು ವರ್ಷಗಳ ಕಾಲ ಆರ್ಸಿಬಿ ಪರ ಆಡಿದ್ದರು. ಅವರು ಅನೇಕ ಬಾರಿ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಆದರೆ, ಈವರೆಗೆ ಅವರು ಕನ್ನಡದ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿರಲಿಲ್ಲ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!