ಯೂನಿವರ್ಸಲ್ ಬಾಸ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್….

ಕನ್ನಡ ಹಾಡಿಗೆ ಎಗ್ಸೈಟ್ ಆದ ವಿಶ್ವಪ್ರಸಿದ್ಧ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್
‘ಲೈಫ್ ಈಸ್ ಕೆಸಿನೋ’ಎಂಬ ಈ ಹಾಡು ಕನ್ನಡ ಸಿನಿಮಾ ರಂಗದಲ್ಲಿ ಹೊಸ ಅಧ್ಯಾಯವನ್ನು ತೆರೆಯಲಿದೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಚಂದನ್ ಶೆಟ್ಟಿ ಅವರು ಈಗಾಗಲೇ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಅದರಲ್ಲೂ ಅವರ ಆಲ್ಬಂ ಸಾಂಗ್ಗಳು ತುಂಬಾನೇ ಫೇಮಸ್. ಈಗ ಅವರು ವೆಸ್ಟ್ ಇಂಡೀಸ್, ಆರ್ಸಿಬಿಯ ಮಾಜಿ ಆಟಗಾರ ಕ್ರಿಸ್ ಗೇಲ್ ಜೊತೆ ವಿಡಿಯೋ ಸಾಂಗ್ ಒಂದನ್ನು ಶೂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಚಂದನ್ ಶೆಟ್ಟಿ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಆಗಿದೆ. ಈ ವಿಡಿಯೋ ಸಾಂಗ್ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಚಂದನ್ ಶೆಟ್ಟಿ ಅವರು ಹಲವು ಹಿಟ್ ಹಾಡುಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹಾಡುಗಳಿಗೆ ದೊಡ್ಡ ಅಭಿಮಾನಿ ವರ್ಗ ಇದೆ. ಆದರೆ, ಇತ್ತೀಚೆಗೆ ಅವರು ಹಾಡುಗಳನ್ನು ಮಾಡೋದನ್ನು ಕಡಿಮೆ ಮಾಡಿದ್ದಾರೆ. ಅಷ್ಟಾಗಿ ಸಾಂಗ್ಗಳು ಅವರಿಂದ ಮೂಡಿ ಬಂದಿರಲಿಲ್ಲ. ಬದಲಿಗೆ ನಟನೆಯ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದರು. ಇದರ ಜೊತೆಗೆ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಯಿತು. ಈಗ ಅದೆಲ್ಲವನ್ನೂ ಮರೆತು ಮುಂದೆ ಸಾಗುತ್ತಿದ್ದಾರೆ.ಚಂದನ್ ಶೆಟ್ಟಿ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಚಂದನ್ ಶೆಟ್ಟಿ ಜೊತೆ ವಿಡಿಯೋ ಸಾಂಗ್ ಶೂಟ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

https://www.instagram.com/reel/DNNZBnLv3qD/?utm_source=ig_web_copy_link&igsh=MzRlODBiNWFlZA==

 

 

 

‘ನಾವು ಹಾಡು ಮಾಡುತ್ತಿದ್ದೇವೆ. ಅದರ ಹೆಸರು ಲೈಫ್ ಈಸ್ ಕೆಸಿನೋ. ನಾನು ಎಗ್ಸೈಟ್ ಆಗಿದ್ದೇನೆ. ನಾನು ಈ ಹಾಡಿನ ಫ್ಯಾನ್ ಆಗಿದ್ದೇನೆ’ ಎಂದಿದ್ದಾರೆ ಚಂದನ್ ಶೆಟ್ಟಿ. ಇದಕ್ಕೆ ಕ್ರಿಸ್ ಗೇಲ್ ಕೂಡ ಖುಷಿ ಆಗಿದ್ದು, ಅವರು ಹೆಮ್ಮೆಯಿಂದ ಈ ಬಗ್ಗೆ ಹೇಳಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಯಿರಿ ಎಂದಿದ್ದಾರೆ.ಕ್ರಿಸ್ ಗೇಲ್ ಅವರಿಗೆ ಬೆಂಗಳೂರಿನ ಬಗ್ಗೆ, ಕನ್ನಡಿಗರ ವಿಶೇಷ ಪ್ರೀತಿ ಇದೆ. ಇದಕ್ಕೆ ಕಾರಣ ಆರ್ಸಿಬಿ. ಅವರು ಹಲವು ವರ್ಷಗಳ ಕಾಲ ಆರ್ಸಿಬಿ ಪರ ಆಡಿದ್ದರು. ಅವರು ಅನೇಕ ಬಾರಿ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಆದರೆ, ಈವರೆಗೆ ಅವರು ಕನ್ನಡದ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿರಲಿಲ್ಲ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!