ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ ಮಗುವಿನ ಜನ್ಮದ ಸಂತೋಷದ ಕುರಿತು ವಿವರಗಳಿವೆ. ದೀಪಿಕಾ ಅವರ ಜನ್ಮದಿನದ ಸಂದರ್ಭದಲ್ಲಿ ಈ ವಿಡಿಯೋಗಳು ಮತ್ತೆ ವೈರಲ್ ಆಗಿವೆ.
ದೀಪಿಕಾ ಹಾಗೂ ರಣವೀರ್ ಪ್ರೀತಿಸಿ ವಿವಾಹ ಆದವರು. ಒಂದೇ ಸಿನಿಮಾದಲ್ಲಿ ನಟಿಸಿದ ಇವರಿಗೆ ಸೆಟ್ನಲ್ಲೇ ಪ್ರೀತಿ ಮೂಡಿತು. ರಣವೀರ್ ಸಿಂಗ್ ಹಾಗೂ ದೀಪಿಕಾ ಈಗ ಪಾಲಕರೂ ಹೌದು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣವೀರ್ ಹಾಗೂ ದೀಪಿಕಾ ಪ್ರೀತಿ ಶುರುವಾಗಿದ್ದು ದಶಕಗಳ ಹಿಂದೆ. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ.
ದೀಪಿಕಾ ಪಡುಕೋಣೆ ಅವರು ಕರ್ನಾಟಕದವರು. ಅವರಿಗೆ ಕನ್ನಡ ಬರುತ್ತದೆ. ಬೆಂಗಳೂರಲ್ಲಿ ದೀಪಿಕಾ ಶಿಕ್ಷಣ ಪಡೆದಿದ್ದರು. ಅವರು ನಟಿಸಿದ ಮೊದಲ ಸಿನಿಮಾ ‘ಐಶ್ವರ್ಯಾ’ ಕನ್ನಡದ್ದು. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ರಣವೀರ್ ಸಿಂಗ್ ಅವರದ್ದು ಪಂಜಾಬಿ ಕುಟುಂಬ. ಅವರು ಕೆಲವೊಮ್ಮೆ ಬೆಂಗಳೂರಿಗೆ ಬಂದ ಉದಾಹರಣೆ ಇದೆ. ಅವರಿಗೆ ಕನ್ನಡದ ಬರುವುದಿಲ್ಲ. ಅವರು ಈ ಮೊದಲು ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ ಮಾಡಿದ್ದರು ಅನ್ನೋದು ವಿಶೇಷ.
ರಣವೀರ್ ಸಿಂಗ್ ಅವರು ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಾ ಇರುತ್ತಾರೆ. ಅದೇ ರೀತಿ ಅವರು ಅವಾರ್ಡ್ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿ ಯಶ್ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಅವರ ಜೊತೆ ಇದ್ದಿದ್ದು, ಕನ್ನಡದ ಅಕುಲ್ ಬಾಲಾಜಿ. ಅವರು ಕನ್ನಡದ ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಆ ಶೋನ ಅಕುಲ್ ನಡೆಸಿಕೊಡುತ್ತಾ ಇದ್ದರು. ಈ ವೇಳೆ ರಣವೀರ್ ಸಿಂಗ್ಗೆ ಕನ್ನಡದಲ್ಲಿ ಪ್ರಪೋಸ್ ಮಾಡೋದನ್ನು ಹೇಗೆ ಎಂದು ಹೇಳಿಕೊಟ್ಟರು ಅಕುಲ್.
‘ದೀಪಿಕಾ, ಓ ನನ್ನ ದೀಪಿಕಾ’ ಎಂದರು ಅಕುಲ್. ರಣವೀರ್ ಸಿಂಗ್ಗೆ ತಪ್ಪಾಗಿ ಏನಾದರೂ ಹೇಳಿಕೊಟ್ಟರೆ ಎಂಬ ಭಯ ಅತಿಯಾಗಿ ಕಾಡಿತ್ತು. ಈ ಕಾರಣದಿಂದಲೇ ‘ನನಗೆ ಮನೆಗೆ ಹೋಗಬೇಕು, ನಾನು ಇದನ್ನು’ ಎಂದರು ರಣವೀರ್ ಸಿಂಗ್. ಆಗ, ಅಕುಲ್ ಅವರು ತಪ್ಪಾಗಿ ಏನನ್ನೂ ಹೇಳಿಕೊಡಲ್ಲ ಎಂದು ಪ್ರಾಮಿಸ್ ಮಾಡಿದರು. ಆ ಬಳಿಕ ‘ದೀಪಿಕಾ, ಓ ನನ್ನ ದೀಪಿಕಾ, ನೀನೆ ನನ್ನ ಜೀವನದ ದೀಪ’ ಎಂದು ಅಕುಲ್ ಹೇಳಿಕೊಟ್ಟರು. ದೀಪ ಎನ್ನುತ್ತಿದ್ದಂತೆ ‘ಯು ಆರ್ ದಿ ಲೈಟ್ ಆಫ್ ಮೈ ಲೈಫ್’ ಎಂದರು
ರಣವೀರ್ ಸಿಂಗ್ ..

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!